BengaluruPolitics

ಹಿರಿಯೂರು ಶಾಸಕಿ ಪೂರ್ಣಿಮಾ ಪತಿ ಅಮಾನತು ಆದೇಶ ವಾಪಸ್‌

ಚಿತ್ರದುರ್ಗ; ಹಿರಿಯೂರು ಶಾಸಕಿ ಪೂರ್ಣಿಮಾ ಅವರು ಈಗಾಗಲೇ ಕ್ಷೇತ್ರದಲ್ಲಿ ಬರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಆದ್ರೆ ಅವರ ಪತಿ .ಟಿ.ಶ್ರೀನಿವಾಸ್‌ ಅವರನ್ನು ಬಿಜೆಪಿ ಅಮಾನತು ಮಾಡಿದ್ದರಿಂದ ಕೊಂಚ ಸಮಸ್ಯೆ ಇತ್ತು. ಅದನ್ನು ಬಿಜೆಪಿ ನಾಯಕರು ಇತ್ಯರ್ಥ ಮಾಡಿದ್ದು, ಶ್ರೀನಿವಾಸ್‌ ಅವರ ಅಮಾನತು ಆದೇಶವನ್ನು ವಾಪಸ್‌ ಪಡೆಯಲಾಗಿದೆ.

ವಿಧಾನಪರಿಷತ್‌ ಚುನಾವಣೆಯಲ್ಲಿ ಪೂರ್ಣಿಮಾ ಅವರ ಪತಿ ಶ್ರೀನಿವಾಸ್‌ ಅವರು ಬಿಜೆಪಿಯಿಂದ ಟಿಕೆಟ್‌ ಸಿಗದಿದ್ದಕ್ಕೆ ಬಂಢಾಯ ಅಭ್ಯರ್ಥಿಯಾಗಿ ಸ್ಪರ್ಧೆಮಾಡಿದ್ದರು. ಆಗ್ನೇಯ ಪದವೀಧರರ ಕ್ಷೇತ್ರದಿಂದ ಅವರು ಸ್ಪರ್ಧೆ ಮಾಡಿ ಬಿಜೆಪಿಗೆ ಪೈಪೋಟಿ ನೀಡಿದ್ದರು. ಈ ಕಾರಣದಿಂದಾಗಿ ಅವರನ್ನು ಬಿಜೆಪಿಯಿಂದ ಅಮಾನತು ಮಾಡಲಾಗಿತ್ತು. ಆದ್ರೆ ಇದೀಗ ಚುನಾವಣೆ ಹತ್ತಿರ ಬಂದಿರುವುದರಿಂದ ಮುಜುಗರ ಆಗಬಾರದು ಎಂಬ ಕಾರಣಕ್ಕೆ ಶ್ರೀನಿವಾಸ್‌ ಅವರ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ.

Share Post