BengaluruHealth

ಬಡ ಹೃದ್ರೋಗಿಗಳಿಗೆ ಶೇಕಡಾ 50ರಷ್ಟು ರಿಯಾಯಿತಿ; ಸಿಎಂ ಬೊಮ್ಮಾಯಿ ಮೆಚ್ಚುಗೆ

ಬೆಂಗಳೂರು; ಇತ್ತೀಚೆಗೆ ಹೃದ್ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅದರ ಚಿಕಿತ್ಸಾ ವೆಚ್ಚ ಕೂಡಾ ಜಾಸ್ತಿಯೇ ಇದೆ. ಆದ್ರೆ ಇಲ್ಲೊಂದು ಆಸ್ಪತ್ರೆ ಕಡಿಮೆ ವೆಚ್ಚದಲ್ಲಿ ಹೃದ್ರೋಗ ಚಿಕಿತ್ಸೆ ನೀಡಲು ಮುಂದಾಗಿದೆ. ಬಡ ಹೃದ್ರೋಗಿಗಳಿಗೆ ಯಾವುದೇ ದಾಖಲೆ ಇಲ್ಲದಿದ್ದರೂ ಕೂಡಾ ಶೇಕಡಾ 50 ರಷ್ಟು ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡಲಾಗುತ್ತದೆ. 

ಬೆಂಗಳೂರಿನ ವಿದ್ಯಾರಣ್ಯ ಪುರದ ರಾಮಚಂದ್ರಾಪುರದ ಕ್ಯಾನ್ಸ್‌ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಈ ವ್ಯವಸ್ಥೆ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಈ ಆಸ್ಪತ್ರೆಯನ್ನು ಉದ್ಘಾಟನೆ ಮಾಡಿದ್ದು, ಆಸ್ಪತ್ರೆ ಆಡಳಿತ ಮಂಡಳಿ ಬಡಜನರ ಸೇವೆಗೆ ಮುಂದಾಗಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Share Post