BengaluruPolitics

ನಾನು ಬಿಜೆಪಿಯಲ್ಲೇ ಇದ್ದೇನೆ, ಇರುತ್ತೇನೆ; ಕೆ.ಸಿ.ನಾರಾಯಣಗೌಡ

ಬೆಂಗಳೂರು; ನಾನು ಬಿಜೆಪಿಯಲ್ಲೇ ಇದ್ದೇನೆ, ಬಿಜೆಪಿಯಲ್ಲೇ ಇರುತ್ತೇನೆ ಎಂದು ಸಚಿವ ಕೆ.ಸಿ.ನಾರಾಯಣ ಗೌಡ ಸ್ಪಷ್ಟಪಡಿಸಿದ್ದಾರೆ. ಕೆ.ಸಿ.ನಾರಾಯಣಗೌಡ ಅವರು ಕಾಂಗ್ರೆಸ್‌ ಸೇರುತ್ತಾರೆ ಎಂಬ ವದಂತಿ ಹಬ್ಬಿತ್ತು. ಈ ಹಿಂದೆ ನಾರಾಯಣಗೌಡರೇ ಕಾಂಗ್ರೆಸ್‌ನಿಂದ ಆಹ್ವಾನವಿದೆ ಎಂದು ಹೇಳಿದ್ದರು. ಈ ಕಾರಣಕ್ಕಾಗಿ ಅವರು ಕಾಂಗ್ರೆಸ್‌ ಸೇರುತ್ತಾರೆಂಬ ಸುದ್ದಿ ಹಬ್ಬಿತ್ತು. ಈ ನಡುವೆ ಕೆ.ಆರ್‌.ಪೇಟೆ ಕಾಂಗ್ರೆಸ್‌ ಕಾರ್ಯಕರ್ತರು ಇದಕ್ಕೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ಮಾಡಿದ್ದರು. ಈ ಬೆನ್ನಲ್ಲೇ ನಾರಾಯಣಗೌಡರು ಸ್ಪಷ್ಟನೆ ನೀಡಿದ್ದಾರೆ.

ನಾನು ಬಿಜೆಪಿಯಲ್ಲೇ ಇದ್ದೇನೆ. ಬಿಜೆಪಿ ಅಭ್ಯರ್ಥಿಯಾಗಿಯೇ ಸ್ಪರ್ಧೆ ಮಾಡುತ್ತೇನೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಕೆ.ಸಿ.ನಾರಾಯಣಗೌಡರು ತಿಳಿಸಿದ್ದಾರೆ.

Share Post