BengaluruPolitics

ನಾನು ವಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿಯಲ್ಲ; ಮಾಜಿ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ; ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ತಿಂಗಳು ಕಳೆದಿದೆ. ಆದ್ರೆ ವಿಪಕ್ಷ ನಾಯಕನ ಆಯ್ಕೆ ಮಾತ್ರ ಆಗಿಲ್ಲ. ಬಿಜೆಪಿಯಲ್ಲಿ ಇನ್ನೂ ಈ ಬಗ್ಗೆ ಚರ್ಚೆ ಕೂಡಾ ನಡೆದಿಲ್ಲ. ವಿಕ್ಷ ನಾಯಕನ ಸ್ಥಾನ ಬೇಕೆನ್ನು ಆಕಾಂಕ್ಷಿಗಳೂ ಕಾಣಿಸುತ್ತಿಲ್ಲ. ಈ ನಡುವೆ ನನಗೆ ವಿಪಕ್ಷ ನಾಯಕನ ಸ್ಥಾನ ಬೇಡ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಬೊಮ್ಮಾಯಿಯವರು ಈ ಬಗ್ಗೆ ಮಾತನಾಡಿದ್ದಾರೆ. ಅಧಿವೇಶನ ಕರೆದ ಕೂಡಲೇ ಬಿಜೆಪಿಯಿಂದ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗುತ್ತದೆ. ಆದ್ರೆ ನಾನು ಆ ಸ್ಥಾನಕ್ಕೆ ಆಕಾಂಕ್ಷಿಯಲ್ಲ ಎಂದು ಹೇಳಿದ್ದಾರೆ. ಇನ್ನು ಚುನಾವಣೆಯಲ್ಲಿನ ಸೋಲಿಗೆ ವರಿಷ್ಠರು ಬೇಸರ ಮಾಡಿಕೊಂಡಿಲ್ಲ. ರಾಜ್ಯದ ಜನ ಕೊಟ್ಟ ತೀರ್ಪನ್ನು ನಾವು ಒಪ್ಪಿದ್ದೇವೆ. ನಾನೇ ಈ ಸೋಲಿನ ಹೊಣೆ ಹೊತ್ತಿದ್ದೇನೆ ಎಂದು ಹೇಳಿದರು.

Share Post