Bengaluru

ನಾನು ಯಾವುದೇ ಬಂದ್‌ಗೆ ಬೆಂಬಲ ಕೊಡೋದಿಲ್ಲ; ಕರವೇ ನಾರಾಯಣಗೌಡ

ಬೆಂಗಳೂರು; ಬಂದ್‌ ಎಂದರೆ ಟೌನ್‌ಹಾಲ್‌ನಿಂದ ಮೆರವಣಿಗೆ ಮಾಡೋದು ಅಷ್ಟೇನಾ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಪ್ರಶ್ನೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಬಂದ್‌ ಮಾಡುವುದರಿಂದ ಕಾವೇರಿಯನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಕನ್ನಡಪರ ಹಾಗೂ ರೈತ ಸಂಘಟನೆಗಳಿಂದ ಇಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ. ಶುಕ್ರವಾರ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಆದ್ರೆ ಎರಡೂ ಗುಂಪಿನಲ್ಲೂ ಕರವೇ ನಾರಾಯಣಗೌಡ ಬಣ ಕಾಣಿಸಿಕೊಂಡಿಲ್ಲ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಾರಾಯಣಗೌಡರು, ಭಾಷೆ, ನೆಲ, ಜಲದ ವಿಚಾರವಾಗಿ ನಮ್ಮ ಹೋರಾಟ ಇದ್ದೇ ಇದೆ. ಆದ್ರೆ ಬಂದ್‌ ಮಾಡುವುದರಿಂದಾಗಿ ಜನಸಾಮಾನ್ಯರಿಗೆ ತೊಂದರೆಯಾಗುತ್ತದೆ. ದಿನಗೂಲಿ ನೌಕರರು, ಸಣ್ಣ ಪುಟ್ಟ ವ್ಯಾಪಾರ ಮಾಡುವವರು ಸಂಕಷ್ಟ ಅನುಭವಿಸುತ್ತಾರೆ. ಹೀಗಾಗಿ ಯಾವುದೇ ಬಂದ್‌ಗೆ ನಮ್ಮ ಬೆಂಬಲವಿಲ್ಲ ಎಂದು ನಾರಾಯಣಗೌಡರು ಹೇಳಿದ್ದಾರೆ.

Share Post