BengaluruPolitics

ನನಗೆ ಚಿಲ್ರೆ ಬುದ್ಧಿ ಗೊತ್ತಿಲ್ಲ, ಬಿಜೆಪಿ ಬಿಡಲ್ಲ; ಭಾವುಕರಾಗಿ ನುಡಿದ ವಿ.ಸೋಮಣ್ಣ

ಬೆಂಗಳೂರು; ಸಚಿವ ವಿ.ಸೋಮಣ್ಣ ಕಾಂಗ್ರೆಸ್‌ ಸೇರುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಬೆನ್ನಲ್ಲೇ ಡಿ.ಕೆ.ಶಿವಕುಮಾರ್‌ ಹಾಗೂ ಸೋಮಣ್ಣ ಅವರು ವಿಮಾನದಲ್ಲಿ ಅಕ್ಕಪಕ್ಕ ಕುಳಿತಿರುವ ಫೋಟೋ ವೈರಲ್‌ ಆಗಿದೆ. ಈ ಹಿನ್ನೆಲೆಯಲ್ಲಿ ಸಚಿವ ಸೋಮಣ್ಣ ಅವರು ಸ್ಪಷ್ಟನೆ ನೀಡಲು ಇಂದು ಸುದ್ದಿಗೋಷ್ಠಿ ಕರೆದಿದ್ದರು. ಈ ವೇಳೆ ಭಾವುಕರಾಗಿ ಅವರು ಕಣ್ಣೀರು ಹಾಕಿದ್ದಾರೆ.

ನನಗೆ ಚಿಲ್ಲರೆ ಬುದ್ದಿ ಗೊತ್ತಿಲ್ಲ, ಚಿಲ್ಲರೆ ರಾಜಕಾರಣವನ್ನೂ ನಾನು ಮಾಡೋನಲ್ಲ ಎಂದ ಸೋಮಣ್ಣ ಅವರು, ಭಾವುಕರಾಗಿ ಕಣ್ಣೀರು ಹಾಕಿದರು. ನನ್ನ ತಂದೆ ತಾಯಿ ಸಂಸ್ಕಾರ ಕೊಟ್ಟಿದ್ದಾರೆ. ನಾನು ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ ಬಂದವನು. ಆದ್ರೆ ರಾಜಕೀಯದಲ್ಲಿ ಹಂತ ಹಂತವಾಗಿ ಮೇಲೇರಲು ಅವಕಾಶ ಸಿಕ್ಕಿತು. ಆದ್ರೆ ನಾನು ಎಂದೂ ಚಿಲ್ಲರೆ ರಾಜಕಾರಣ ಮಾಡಿಲ್ಲ ಎಂದು ಸೋಮಣ್ಣ ಹೇಳಿದರು.

ನಾನು ಕೆಲವು ಸಂಗತಿಗಳನ್ನು ಹೇಳುವಾಗ ನಿಷ್ಠುರವಾಗಿ ಮಾತಾಡುತ್ತೇನೆ. ಡಿ.ಕೆ.ಶಿವಕುಮಾರ್ ಅವರು ನಮ್ಮ ತಾಲ್ಲೂಕಿನವರು. ಆದ್ರೆ, ನಾನು ಅವರನ್ನು ಸಂಪರ್ಕಿಸಿಲ್ಲ. ಅವರ ಜೊತೆ ಕಾಂಗ್ರೆಸ್‌ ಸೇರುವ ಬಗ್ಗೆ ಮಾತನಾಡಿಲ್ಲ. ನಾನು ಯಾವುದೇ ಕಾರಣಕ್ಕೂ ಬಿಜೆಪಿ ಬಿಟ್ಟು ಹೋಗೋದಿಲ್ಲ ಎಂದು ಸೋಮಣ್ಣ ಹೇಳಿದರು.

Share Post