BengaluruPolitics

ಪಕ್ಷ ಕಟ್ಟಿದ್ದೇನೆ, ಹಿರಿಯರು, ಕಿರಿಯರೆಲ್ಲಾ ಸಹಕಾರ ಕೊಡ್ತಾರೆ; ಡಿ.ಕೆ.ಶಿವಕುಮಾರ್‌

ಬೆಂಗಳೂರು; ಕಾಂಗ್ರೆಸ್‌ ಪಕ್ಷವನ್ನು ನಾನು ಕಷ್ಟ ಕಾಲದಲ್ಲಿ ಮುನ್ನಡೆಸಿದ್ದೇನೆ. ಹೀಗಾಗಿ ಪಕ್ಷದಲ್ಲಿನ ಹಿರಿಯರು, ಕಿರಿಯರು ಎಲ್ಲರೂ ನನಗೆ ಸಹಕಾರ ಕೊಡುತ್ತಾರೆ ಎಂಬ ನಂಬಿಕೆ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ನಿದ್ದೆ ಇಲ್ಲದೆ ಕೆಲಸ ಮಾಡಿದ್ದೇನೆ. ಹೀಗಾಗಿ ನನಗೆ ಎಲ್ಲರೂ ಸಹಕರಿಸುತ್ತಾರೆಂಬ ನಂಬಿಕೆ ಇದೆ ಎಂದು ಹೇಳಿದ್ದಾರೆ.

ದಿನೇಶ್‌ ಗುಂಡೂರಾವ್‌ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟರು. ಉಪಚುನಾವಣೆ ಮುಗಿದ ಬಳಿಕ ಶಾಸಕಾಂಗ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಕೂಡಾ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡೋದಕ್ಕೆ ಮುಂದಾಗಿದ್ದರು. ಇದೇ ವೇಳೆ ನಾನು ಅಧಿಕಾರ ಸ್ವೀಕಾರ ಮಾಡಿ, ಅಂದಿನಿಂದ ನಿದ್ದೆಯಿಲ್ಲದೆ ನಾನು ಪಕ್ಷ ಸಂಘಟನೆ ಮಾಡಿದ್ದೇನೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಇನ್ನು ಅಧಿಕಾರ ಹಂಚಿಕೆ ಮಾಡಲಾಗುತ್ತದಾ ಎಂಬ ಪ್ರಶ್ನೆಗೆ ಉತ್ತರ ಕೊಟ್ಟ ಡಿ.ಕೆ.ಶಿವಕುಮಾರ್‌ ಅವರು, ಹೈಕಮಾಂಡ್‌ ಮಟ್ಟದಲ್ಲಿ ಆ ತರದ ಯಾವುದೇ ಚರ್ಚೆ ನಡೆದಿಲ್ಲ. ಖರ್ಗೆ, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಏನು ತೀರ್ಮಾನ ಮಾಡುತ್ತಾರೋ ಅದೇ ಅಂತಿಮವಾಗುತ್ತದೆ ಎಂದು ತಿಳಿಸಿದರು.

Share Post