BengaluruPolitics

ನಾನೇ ಗೃಹಲಕ್ಷ್ಮೀ ಯೋಜನೆಯಲ್ಲಿ ಸ್ವಲ್ಪ ಹೋಲ್ಡ್‌ ಮಾಡಿಸಿದ್ದೇನೆ; ಡಿ.ಕೆ.ಶಿವಕುಮಾರ್‌

ಬೆಂಗಳೂರು; ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ವಿಧಾನವನ್ನು ಸರಳ ಮಾಡಲಾಗುತ್ತಿದೆ. ಅದಕ್ಕಾಗಿಯೇ ನಾನೇ ಸಿಎಂ ಜೊತೆ ಮಾತನಾಡಿ, ಗೃಹಲಕ್ಷ್ಮೀ ಯೋಜನೆಯನ್ನು ಸ್ವಲ್ಪ ಹೋಲ್ಡ್‌ ಮಾಡಿಸಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗಲಾಟೆ, ಗೊಂದಲ ಕಡಿಮೆ ಮಾಡಲು ಹೀಗೆ ಮಾಡಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವರೊಂದಿಗೆ ಸಭೆ ಮಾಡಲಿದ್ದೇವೆ. ಸರಳತೆ ಮೂಲಕ ಯೋಜನೆ ಅನುಷ್ಠಾನ ಮಾಡ್ತೀವಿ ಎಂದೂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬಿಜೆಪಿ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಕೆಶಿ, ಅವರಿಗೆ ಪ್ರಜಾಪ್ರಭುತ್ವದಲ್ಲಿ ಹೋರಾಟಕ್ಕೆ ಅವಕಾಶ ಇದೆ. ಆದ್ರೆ ನಾವು ಪ್ರತಿಭಟನೆ ಮಾಡಿದಾಗ ನಮ್ಮ ಮೇಲೆ ಕೇಸ್ ಹಾಕಿರೋದನ್ನ ನೆನೆಸಿಕೊಳ್ಳಲಿ ಎಂದರು.

Share Post