BengaluruPolitics

ಕಾಂಗ್ರೆಸ್‌ ಮುಖಂಡರ ಮನೆ ಮೇಲೆ ಐಟಿ ದಾಳಿ; ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು; ಇಂದು ಬೆಳಗ್ಗೆ ಹಲವು ಕಾಂಗ್ರೆಸ್‌ ಮುಖಂಡರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನಮ್ಮೊಂದಿಗೆ ಇರುವವರ ಮನೆಗಳ ಮೇಲೆ ಐಟಿ ದಾಳಿ ನಡೆಯುತ್ತಿದೆ. ನಮ್ಮನ್ನು ಹೆದರಿಸಲು ಬಿಜೆಪಿ ಈ ರೀತಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಏನು ಬೇಕಾದರೂ ಮಾಡಲಿ ನಾವು ರಾಜ್ಯದಲ್ಲಿ ಬದಲಾವಣೆ ತರುತ್ತೇವೆ. ಎಂದು ಡಿ.ಕೆ.ಶಿವಕುಮಾರ್‌ ಇದೇ ವೇಳೆ ಹೇಳಿದರು. ಚಿಕ್ಕಮಗಳೂರು ಕಾಂಗ್ರೆಸ್‌ ಉಸ್ತುವಾರಿಯಾಗಿ ವಿವೇಕ್‌ ಪೂಜಾರಿ, ಪಿರಿಯಾಪಟ್ಟಣ ಕಾಂಗ್ರೆಸ್‌ ಅಭ್ಯರ್ಥಿ ಕೆ.ವೆಂಕಟೇಶ್‌ ಮುಂತಾದವರ ಮನೆ, ಕಚೇರಿಗಳ ಮೇಲೆ ಐಟಿ ದಾಳಿ ನಡೆಸಲಾಗಿದೆ.

Share Post