BengaluruPolitics

ದಾಖಲೆ ಕೊಡ್ತೀನಿ, ಅರೆಸ್ಟ್‌ ಮಾಡಿಸ್ತೀರಾ..?; ಸರ್ಕಾರಕ್ಕೆ ಹೆಚ್ಡಿಕೆ ಸವಾಲು

ಬೆಂಗಳೂರು; ವರ್ಗಾವಣೆ ದಂಧೆ ನಿಲ್ಲಿಸೋ ಶಕ್ತಿ ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕಿದೆಯಾ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಕ್ರಮವಾಗಿ ವರ್ಗಾವಣೆ ಮಾಡಲಾಗುತ್ತಿದೆ. ವರ್ಗಾವಣೆಗಾಗಿ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಸಿಎಂ ಸಿದ್ದರಾಮಯ್ಯ ಅವರ ನೆರಳಿನಲ್ಲೇ ವಸೂಲಿ ದಂದೆ ನಡೆಯುತ್ತಿದೆ ಎಂದು ಕುಮಾರಸ್ವಾಮಿ, ಕಾಂಗ್ರೆಸ್‌ ಪಕ್ಷ ರಾಜಕೀಯ ದ್ವೇಷ ಮಾಡುತ್ತಿದೆ ಎಂದು ಆರೋಪಿಸಿದರು. ಇನ್ನು ಪೆನ್‌ಡ್ರೈವ್‌ನಲ್ಲಿರುವ ಮಾಹಿತಿ ರಿಲೀಸ್‌ ಸಂಬಂಧವೂ ಅವರು ಮಾತನಾಡಿದರು. ನಾನು ಎಲ್ಲಾ ದಾಖಲೆಗಳನ್ನೂ ಬಿಡುಗಡೆ ಮಾಡುತ್ತೇನೆ. ಆರೋಪಿಗಳನ್ನು ಅರೆಸ್ಟ್‌ ಮಾಡಿಸುತ್ತೀರಾ ಎಂದು ಸರ್ಕಾರಕ್ಕೆ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

Share Post