BengaluruCrime

ಫಾಜಿಲ್‌, ಮಸೂದ್‌ ಮನೆಗೂ ಹೋಗ್ತೇನೆ; ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು; ಪ್ರವೀಣ್‌ ನೆಟ್ಟಾರು ಅವರ ಮನೆಗಷ್ಟೇ ಅಲ್ಲ, ಕೊಲೆಯಾದ ಎಲ್ಲರ ಮನೆಗೂ ಭೇಟಿ ನೀಡುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ವಾರದಲ್ಲಿ ಮೂವರ ಕೊಲೆಯಾಗಿದೆ. ಆದರೆ ಸಿಎಂ ಪ್ರವೀಣ್‌ ಒಬ್ಬರ ಮನೆಗೆ ಮಾತ್ರ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ ಎಂದು ವಿಪಕ್ಷಗಳು ಆರೋಪ ಮಾಡಿದ್ದವು. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಶೀಘ್ರದಲ್ಲೇ ಎಲ್ಲರ ಮನೆಗೂ ಭೇಟಿ ನೀಡಿ ಸಾಂತ್ವನ ಹೇಳುತ್ತೇವೆ ಎಂದು ತಿಳಿಸಿದರು.

ಶೀಘ್ರದಲ್ಲೇ ಫಾಜಿಲ್‌ ಹಾಗೂ ಮಸೂದ್‌ ಮನೆಗೂ ಭೇಟಿ ನೀಡುತ್ತೇನೆ ಎಂದು ಹೇಳಿರುವ ಸಿಎಂ ಬೊಮ್ಮಾಯಿ, ಶೀಘ್ರದಲ್ಲೇ ಪ್ರವೀಣ್‌ ಕೊಲೆ ಪ್ರಕರಣವನ್ನು ಎನ್‌ಐಎಗೆ ವಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಪೊಲೀಸರಿಂದ ಸರಣಿ ಹತ್ಯೆ ಪ್ರಕರಣಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ. ಕೇರಳ ಗಡಿ ಪ್ರದೇಶದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಎಂದೂ ಸಿಎಂ ಇದೇ ವೇಳೆ ಹೇಳಿದರು.

Share Post