BengaluruPolitics

ನಾನು ಬಿಜೆಪಿಯಲ್ಲೇ ಇರುತ್ತೇವೆ, ಕಾಂಗ್ರೆಸ್‌ಗೆ ಹೋಗಲ್ಲ; ಮುನಿರತ್ನ

ಬೆಂಗಳೂರು; ರಾಜರಾಜೇಶ್ವರಿ ನಗರ ಅಭಿವೃದ್ಧಿಗೆ ಸಿದ್ಧರಿದ್ದಾರೆ ಎಂದರೆ ನನ್ನನ್ನ ಜೈಲಿನಲ್ಲಿಡಲಿ ಬೇಕಾದರೆ, ರಾಜರಾಜೇಶ್ವರಿ ನಗರದ ಅಭಿವೃದ್ಧಿಗಾಗಿ ನಾನು ಜೈಲು ವಾಸ ಅನುಭವಿಸಲು ಕೂಡಾ ಸಿದ್ಧ ಎಂದು ಶಾಸಕ ಮುನಿರತ್ನ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ತನಿಖೆ ಎಲ್ಲಾ ಕ್ಷೇತ್ರಗಳಲ್ಲೂ ನಡೆಯಬೇಕು. ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಬೇಕು ಎಂದು ಆಗ್ರಹಿಸಿದರು.

ಇನ್ನು ಆಪರೇಷನ್‌ ಹಸ್ತದ ಬಗ್ಗೆ ಮಾತನಾಡಿರುವ ಮುನಿರತ್ನ ಅವರು, ನಾನು ಬಿಜೆಪಿಯಲ್ಲೇ ಇರುತ್ತೇನೆ. ಇಲ್ಲಿ ನನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದಾರೆ. ನಾನು ಕಾಂಗ್ರೆಸ್‌ಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದರು. ಕೆಲ ಶಾಸಕರು ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿದ್ದಾರೆಂಬ ಸುದ್ದಿ ಬಗ್ಗೆ ಮಾತನಾಡಿದ ಮುನಿರತ್ನ ಅವರು, ಅವರ ಮನೆಗೆ ಹಿಂಬಾಗಿಲಿನಿಂದ ಹೋಗಿದ್ದರಾ..? ಬುರ್ಖಾ ಹಾಕಿಕೊಂಡು ಹೋಗಿದ್ದರಾ ಎಂದು ಪ್ರಶ್ನೆ ಮಾಡಿದ್ದಾರೆ.

 

Share Post