Bengaluru

ಅಗತ್ಯಬಿದ್ದರೆ ರಾಜ್ಯದಲ್ಲೂ ಯೋಗಿ ಮಾಡೆಲ್‌ ಜಾರಿ; ಸಿಎಂ ಬೊಮ್ಮಾಯಿ ಎಚ್ಚರಿಕೆ

ಬೆಂಗಳೂರು; ಅಗತ್ಯಬಿದ್ದರೆ ರಾಜ್ಯದಲ್ಲೂ ಯೋಗಿ ಮಾಡೆಲ್‌ ಜಾರಿ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಕೋಮು ಭಾವನೆ ಕಡದುವ ಶಕ್ತಿಗಳನ್ನು ಸೆದೆಬಡಿಯುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಅಪರಾಧಗಳ ತಡೆಗೆ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದೇವೆ. ಉಗ್ರ ಸಂಘಟನೆಗಳ ಜೊತೆ ಸಂಪರ್ಕದಲ್ಲಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಅಂತಹವರನ್ನು ತಿಹಾರ್‌ಗ ಜೈಲಿಗೆ ಕಳುಹಿಸಲಾಗಿದೆ. ಬಾಯಿ ಮಾತಿನಲ್ಲಿ ಅಲ್ಲ, ನಾನು ಮಾಡಿ ತೋರಿಸಿದ್ದೇವೆ ಎಂದು ಸಿಎಂ ಇದೇ ವೇಳೆ ಹೇಳಿದರು.

Share Post