BengaluruPolitics

ಹೈಕಮಾಂಡ್‌ ಒಪ್ಪಿದರೆ ಕೋಲಾರದಲ್ಲೂ ಸ್ಪರ್ಧೆ; ಸಿದ್ದರಾಮಯ್ಯ

ಬೆಂಗಳೂರು; ಕೋಲಾರ ಹಾಗೂ ವರುಣಾ ಎರಡೂ ಕ್ಷೇತ್ರಕ್ಕೂ ನಾನು ಟಿಕೆಟ್‌ ಕೇಳಿದ್ದೆ. ಹೈಕಮಾಂಡ್‌ ವರುಣಾ ಕ್ಷೇತ್ರಕ್ಕೆ ಟಿಕೆಟ್‌ ಘೋಷಣೆ ಮಾಡಿದೆ. ಕಾಂಗ್ರೆಸ್‌ನಲ್ಲಿ ಹೈಕಮಾಂಡ್‌ ನಿರ್ಧಾರವೇ ಅಂತಿಮವಾಗುತ್ತದೆ. ಹೈಕಮಾಂಡ್‌ ಒಪ್ಪಿಗೆ ಕೊಟ್ಟರೆ ನಾನು ಕೋಲಾರದಲ್ಲೂ ಸ್ಪರ್ಧೆ ಮಾಡುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, 124 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಯಾವುದೇ ಗೊಂದಲವಿಲ್ಲದ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಮುಂದಿನ ಪಟ್ಟಿಯಲ್ಲಿ ಉಳಿದ ಕ್ಷೇತ್ರಗಳಿಗೆ ಟಿಕೆಟ್‌ ಫೈನಲ್‌ ಮಾಡಲಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

 

Share Post