BengaluruPolitics

ನಾವು ಸೂಜಿ ತರಾ ಕೆಲಸ ಮಾಡಿದರೆ ಬಿಜೆಪಿ ಕತ್ತರಿ ಕೆಲಸ ಮಾಡ್ತಿದೆ; ಡಿಕೆಶಿ

ಬೆಂಗಳೂರು; ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಾಟೆ ಪ್ರಕರಣ ಸಂಬಂಧ ನಾವು ಸೂಜಿ ತರದ ಕೆಲಸ ಮಾಡುತ್ತಿದ್ದೇವೆ. ಆದ್ರೆ ಬಿಜೆಪಿ ಕತ್ತರಿ ತರದ ಕೆಲಸ ಮಾಡುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಿನ್ನೆ ರಾಗಿಗುಡ್ಡಕ್ಕೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ ನೀಡಿದ್ದಕ್ಕೆ ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

ಅಲ್ಲಿ ಬಿಜೆಪಿಯವರು ಸತ್ಯಶೋಧನೆ ಮಾಡುವಂತಹದ್ದು ಏನಿದೆ ಎಂದು ಪ್ರಶ್ನೆ ಮಾಡಿದ ಡಿಕೆಶಿ, ಬಿಜೆಪಿಯವರು ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾವು ಸಮಾಜವನ್ನು ಜೋಡಿಸುವ ಕೆಲಸ ಮಾಡ್ತಿದ್ದೇವೆ. ಸೂಜಿ ತರ ಒಲಿಯೋ ಕೆಲಸವನ್ನು ನಾವು ಮಾಡುತ್ತಿದ್ದರೆ, ಬಿಜೆಪಿಯವರು ಕತ್ತರಿ ತರಾ ಸಮಾಜವನ್ನು ಒಡೆಯೋ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

 

Share Post