BengaluruPolitics

ಪದೇ ಪದೇ ಎದ್ದು ನಿಂತು ಮಾತಾಡಿದ್ರೆ ವಿಪಕ್ಷ ಸ್ಥಾನ ಸಿಗಲ್ಲ; ಯತ್ನಾಳ್‌ಗೆ ಸಿದ್ದರಾಮಯ್ಯ ಟಾಂಗ್‌

ಬೆಂಗಳೂರು; ಪದೇ ಪದೇ ಎದ್ದು ನಿಂತು ಮಾತನಾಡಿದರೆ ವಿಪಕ್ಷ ನಾಯಕನ ಸ್ಥಾನ ಸಿಗುತ್ತೆ ಅಂದುಕೊಂಡಿದ್ದೀರಾ ಅಂತ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರಿಗೆ ಸಿಎಂ ಸಿದ್ದರಾಮಯ್ಯ ತಮಾಷೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಮಾತನಾಡುವಾಗ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಪದೇ ಪದೇ ಎದ್ದು ನಿಂತು ಮಾತನಾಡುತ್ತಿದ್ದರು. ಈ ವೇಳೆ ಕೂತ್ಕೊಳಿ ಯತ್ನಾಳ್‌, ಪದೇ ಪದೇ ಎದ್ದು ನಿಂತು ಮಾತಾಡಿದರೆ ವಿಪಕ್ಷ ನಾಯಕನ ಸ್ಥಾನ ಸಿಗುತ್ತಾ ಅಂತ ಹೇಳಿ ನಗೆ ಚಟಾಕಿ ಹಾರಿಸಿದರು.

ನೀವು ರಭಸದಲ್ಲಿ ಪದೇ ಪದೇ ಎದ್ದು ನಿಂತು ಮಾತನಾಡುತ್ತಿದ್ದೀರಿ. ನಿಮಗೆ ವಿಪಕ್ಷ ನಾಯಕನ ಸ್ಥಾನ ಸಿಗುತ್ತೆ ಅಂದುಕೊಂಡಿದ್ದೀರಾ ಎಂದು ಪ್ರಶ್ನೆ ಮಾಡಿದರು. ಕಲಾಪ ಶುರುವಾಗಿ ಮೂರು ದಿನ ಆಯ್ತು. ಇನ್ನೂ ನಿಮಗೆ ಒಬ್ಬ ಲೀಡರ್‌ನ ಆಯ್ಕೆ ಮಾಡಿಕೊಳ್ಳೋದಕ್ಕೆ ಆಗಲಿಲ್ಲ ಎಂದರು.

Share Post