BengaluruPolitics

ನಾನು ಗೊಂದಲದಲ್ಲಿಲ್ಲ, ಮತದಾರರ ಜೊತೆ ತೀರ್ಮಾನ; ಶಿವಲಿಂಗೇಗೌಡ

ಬೆಂಗಳೂರು; ನಾನು ಯಾವುದೇ ಗೊಂದಲದಲ್ಲಿ ಇಲ್ಲ. ಆದ್ರೆ ಮತದಾರರ ಜೊತೆ ಚರ್ಚಿಸಿ ನನ್ನ ರಾಜಕೀಯ ಭವಿಷ್ಯದ ಬಗ್ಗೆ ತೀರ್ಮಾನ ಮಾಡುತ್ತೇನೆ ಅಂತ ಅರಸೀಕೆರೆ ಶಾಸಕ ಶಿವಲಿಂಗೇಗೌಡ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಫೆಬ್ರವರಿ ೧೨ ರಂದು ಅರಸೀಕೆರೆಯಲ್ಲಿ ಸಮಾವೇಶ ನಡೆಸುತ್ತಿದ್ದೇವೆ. ಆ ಸಮಾವೇಶಕ್ಕೆ ನನ್ನ ಹಿತೈಷಿಗಳು ಹಾಗೂ ಬೆಂಬಲಿಗರು ಆಗಮಿಸಲಿದ್ದಾರೆ. ಅವರು ಏನು ಹೇಳುತ್ತಾರೋ ನಾನು ಅದನ್ನು ಮಾಡುತ್ತೇನೆ. ಮತದಾರರ ಜೊತೆ ಚರ್ಚಿಸಿಯೇ ನಾನು ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಅಂತ ಶಿವಲಿಂಗೇಗೌಡ ತಿಳಿಸಿದ್ದಾರೆ.

ಶಿವಲಿಂಗೇಗೌಡ ಅವರು ಜೆಡಿಎಸ್‌ನಿಂದ ಹಲವು ತಿಂಗಳುಗಳಿಂದ ದೂರ ಇದ್ದಾರೆ. ಅವರು ಕಾಂಗ್ರೆಸ್‌ ನಾಯಕರ ಜೊತೆ ಸಂಪರ್ಕದಲ್ಲಿದ್ದಾರೆ. ಕಾಂಗ್ರೆಸ್‌ಗೆ ಅವರು ಹೋಗುತ್ತಾರೆ ಎಂದು ಹೇಳಲಾಗಿತ್ತು. ಆದ್ರೆ ಇನ್ನೂ ಯಾವುದೇ ತೀರ್ಮಾನ ಆಗಿಲ್ಲ. ಈ ನಡುವೆ ಅವರು ಗೊಂದಲದಲ್ಲಿದ್ದಾರೆ ಎಂದು ಹೇಳಲಾಗಿತ್ತು. ಈ ಬಗ್ಗೆ ಅವರು ಇಂದು ಸ್ಪಷ್ಟನೆ ಕೊಟ್ಟಿದ್ದಾರೆ.

 

 

Share Post