Bengaluru

ಮಾರ್ಚ್ 11 ರಂದು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 11 ರಂದು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಮಂಡ್ಯ ತಾಲೂಕಿನ ಹಣಗೆರೆ ಗ್ರಾಮದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಿಜೆಪಿಯ ಮೂಲಗಳಿಂದ ತಿಳಿದುಬಂದಿದೆ.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದರೆ, ಮುಖ್ಯ ಕಾರ್ಯಕ್ರಮದ ಸಮೀಪದಲ್ಲಿ ಪಕ್ಷಕ್ಕೆ ಸಂಬಂಧಿಸಿದ ಸಾರ್ವಜನಿಕ ಸಭೆಯನ್ನು ಆಯೋಜಿಸಲು ಬಿಜೆಪಿ ಮುಂದಾಗಲಿದೆ. ರಾಜ್ಯದ ಎಲ್ಲಾ ಮೋರ್ಚಾಗಳ ಸಮಾವೇಶವನ್ನ ನಡೆಸಲು ಚಿಂತಿಸಿದೆ ಈ ಸಮಾವೇಶದ ಜವಾಬ್ದಾರಿಯನ್ನು ಬಿ ವೈ ವಿಜಯೇಂದ್ರರವರಿಗೆ ನೀಡಲಾಗುವುದು ಎಂದು ತಿಳಿಸಿದೆ. ಪಕ್ಷದ ಕಾರ್ಯಕ್ರಮಕ್ಕೆ ಪ್ರಧಾನಿಯನ್ನು ಆಹ್ವಾನಿಸಲು ಯೋಚಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Share Post