Bengaluru

ಬೆಂಗಳೂರಿನ ಮಂತ್ರಿ ಮಾಲ್‌ ಬಳಿ ಭೀಕರ ಅಪಘಾತ

ಬೆಂಗಳೂರು : ನಗರದ ಮಲ್ಲೇಶ್ವರಂನಲ್ಲಿರುವ ಮಂತ್ರಿ ಮಾಲ್‌ ಬಳಿ ತಡ ರಾತ್ರಿಯಲ್ಲಿ  ಭೀಕರ ಅಪಘಾತ ಸಂಭವಿಸಿದೆ. ಮೂರನೇ ಅಲೆಯ ನಿಯಂತ್ರಣಕ್ಕೆ ಸರ್ಕಾರ ನೈಟ್‌ ಕರ್ಫ್ಯೂ ವಿಧಿಸಿದ್ದರೂ ಕೂಡ ಈ ದುರ್ಘಟನೆ ನಡೆದಿದೆ.

ಇನೋವಾ ಕ್ರಿಸ್ಟಾ ಕಾರು ಅಪಘಾತಗೊಂಡಿದ್ದು ಮುಂದಿನ ಬಹುತೇಕ ಭಾಗ ಜಖಂಗೊಂಡಿದೆ. ಓವರ್‌ ಸ್ಪೀಡಾಗಿ ಬಂದು ಡಿವೈಡರ್‌ಗೆ ಗುದ್ದಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗ್ತಿದೆ. ಡ್ರೈವರ್‌ ಸೇರಿ ಇಬ್ಬರು ಕಾರಿನಲ್ಲಿ ಚಲಿಸುತ್ತಿದ್ದರು. ಕಾರಿನ ಏರ್‌ ಬ್ಯಾಗ್‌ ಓಪನ್‌ ಆಗಿರುವ ಕಾರಣ ಸಣ್ಣ ಪುಟ್ಟ ಗಾಯಗಳಾಗಿವೆ.

ಕಾರಿನಲ್ಲಿದ್ದ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಘಟನಾ ಸ್ಥಳಕ್ಕೆ ಹೈಗ್ರೌಂಡ್ಸ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರಿನಲ್ಲಿ ಮಧ್ಯದ ಬಾಟಲಿಗಳು ಪತ್ತೆಯಾಗಿದ್ದು, ಮದ್ಯ ಸೇವಿಸಿ ಕಾರು ಚಲಿಸಿರುವ ಶಂಖೆ ಮೂಡುತ್ತಿದೆ, ಮದ್ಯ ಸೇವನೆ ಮಾಡಿರುವುದು ಕಂಡು ಬಂದರೆ ಡ್ರಿಂಕ್ ಆ್ಯಂಡ್ ಡ್ರೈವ್ ಕೇಸ್ ಅಡಿ ಪ್ರಕರಣ ದಾಖಲಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

Share Post