Bengaluru

ಯುಗಾದಿ ನಂತರ ರಾಜ್ಯ, ರಾಷ್ಟ್ರ ರಾಜಕಾರಣದಲ್ಲಿ ಅಸ್ಥಿರತೆ; ಕೋಡಿ ಮಠದ ಶ್ರೀ

ಹುಬ್ಬಳ್ಳಿ; ಯುಗಾದಿ ಬಳಿಕ ಏನೇನಾಗುತ್ತೆ ಕಾದು ನೋಡಿ. ಯುಗಾದಿ ಹಬ್ಬ ಕಳೆಯುತ್ತಿದ್ದಂತೆ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಅಸ್ಥಿರತೆ ಉಂಟಾಗಲಿದೆ ಎಂದು ಕೋಡಿಮಠ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿರುವ ಅವರು, ಯುಗಾದಿಯವರೆಗೂ ಏನೂ ಆಗೋದಿಲ್ಲ. ಆದ್ರೆ ಅನಂತರ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲೂ ಅಸ್ಥಿರತೆ ಉಂಟಾಗುತ್ತ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಬರಗಾಲ ಬಂದಿದೆ. ಮನುಷ್ಯನ ಪಾಪಕರ್ಮಗಳೇ ಇಂತಹ ಸ್ಥಿತಿಗೆ ಕಾರಣ ಎಂದು ಅವರು ಹೇಳಿದ್ದಾರೆ.  ಇಂತಹ ಪರಿಸ್ಥಿತಿಗಳನ್ನು ಸಾಮೂಹಿಕವಾಗಿ ಅನುಭವಿಸಬೇಕಾದ ಅಗತ್ಯ ಇದೆ ಎಂದೂ ಶ್ರೀಗಳು ಹೇಳಿದ್ದಾರೆ.

 

Share Post