BengaluruPolitics

ಮೋದಿ ಏನು ದೇವರಾ, ಛೂಮಂತರ್‌ ಬಾಬಾನಾ..?; ನಡ್ಡಾ ಹೇಳಿಕೆಗೆ ಕಾಂಗ್ರೆಸ್‌ ಲೇವಡಿ

ಬೆಂಗಳೂರು; ನಿನ್ನೆ ಶಿಗ್ಗಾಂವಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನಾಮಪತ್ರ ಸಲ್ಲಿಸಿದರು. ಈ ವೇಳೆ ನಡೆದ ರೋಡ್‌ ಶೋನಲ್ಲಿ ಭಾಗಿಯಾಗಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು, ನೀವು ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದದಿಂದ ವಂಚಿತರಾಗಬಾರದು. ಮತ ಹಾಕದೇ ಹೋದರೆ ಮೋದಿಯವರ ಆಶೀರ್ವಾದವನ್ನು ತಪ್ಪಿಸಿಕೊಳ್ಳುವಿರಿ ಎಂದು ಹೇಳಿದ್ದರು. ಇದಕ್ಕೆ ಕಾಂಗ್ರೆಸ್‌ ಲೇವಡಿ ಮಾಡಿದೆ. ಈ ಬಗ್ಗೆ ರಾಜ್ಯ ಕಾಂಗ್ರೆಸ್‌ ಟ್ವಿಟರ್‌ ಖಾತೆಯಲ್ಲಿ ಲೇವಡಿ ಮಾಡಲಾಗಿದ್ದು, ಮೋದಿ ಏನು ದೇವರಾ, ಮಠಾಧೀಶರಾ..? ಅಥವಾ ಛೂಮಂತರ್‌ ಬಾಬಾನಾ ಎಂದು ಪ್ರಶ್ನಿಸಿದೆ.

ಕಾಂಗ್ರೆಸ್‌ ಟ್ವೀಟ್‌ ಈ ಕೆಳಗಿನಂತಿದೆ;

ಮತ ಹಾಕದಿದ್ದರೆ ಮೋದಿಯ ಆಶೀರ್ವಾದ ತಪ್ಪಿಸಿಕೊಳ್ಳುವಿರಿ ಎಂದು ಬೆದರಿಕೆ ಹಾಕಿದ @JPNadda ಅವರೇ, ಆಶೀರ್ವದಿಸಲು ಮೋದಿ ಏನು ದೇವರಾ, ಮಠಾಧೀಶರಾ ಅಥವಾ ಛೂಮಂತರ್ ಬಾಬಾನಾ? ಕನ್ನಡಿಗರ ತೆರಿಗೆ ಭಿಕ್ಷೆಯಲ್ಲಿ ಗತ್ತು, ಗಮ್ಮತ್ತು, ಶೋಕಿ ಮಾಡುತ್ತಿರುವ ಮೋದಿಯೇ ಕನ್ನಡಿಗರಿಗೆ ಋಣಿಯಾಗಿರಬೇಕು ಅಲ್ಲವೇ @BJP4Karnataka?

Share Post