BengaluruCrimeDistricts

ಹಾಲಶ್ರೀ ಮಠದಲ್ಲೇ ನಡೆದಿತ್ತಾ 5 ಕೋಟಿ ಡೀಲ್‌..?; ಫೋಟೋ ಹೇಳುತ್ತೆ ಸಾಕ್ಷಿ..!

ಬೆಂಗಳೂರು; ಬಿಜೆಪಿ ಟಿಕೆಟ್‌ ಕೊಡಿಸುತ್ತೇವೆಂದು ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಐದು ಕೋಟಿ ರೂಪಾಯಿ ವಂಚನೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಈ ನಡುವೆ ಪ್ರಕರಣದ ಎ೩ ಆರೋಪಿಯಾಗಿರುವ ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿಯ ಹಾಲಮಠದ ಹಾಲಶ್ರೀ ಸ್ವಾಮೀಜಿ ನಾಪತ್ತೆಯಾಗಿದ್ದಾರೆ. ಅವರ ಬಂಧನವಾದರೆ ಹಲವು ಪ್ರಮುಖರಿಗೆ ಈ ಪ್ರಕರಣ ಉರುಳಾಗಲಿದೆ ಎಂದು ಹೇಳಲಾಗುತ್ತಿದೆ. ಈ ನಡುವೆ ಹಾಲಮಠದಲ್ಲೇ ಈ ಡೀಲ್‌ ನಡೆದಿರಬಹುದು ಎಂದು ಶಂಕಿಸಲಾಗಿದೆ. ಯಾಕಂದ್ರೆ ಚೈತ್ರಾ ಕುಂದಾಪುರ ಹಾಗೂ ಉದ್ಯಮಿ ಗೋವಿಂದ ಬಾಬು ಪೂಜಾರಿಯವರು ಒಟ್ಟಿಗೆ ಮಠಕ್ಕೆ ಭೇಟಿ ನೀಡಿದ್ದ, ಶ್ರೀಗಳ ಆಶೀರ್ವಾದ ಪಡೆಯುತ್ತಿದ್ದ ಫೋಟೋಗಳು ಈಗ ವೈರಲ್‌ ಆಗುತ್ತಿವೆ.

ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುತ್ತೇವೆಂದು ಚೈತ್ರಾ ಕುಂದಾಪುರ ಗೋವಿಂದ ಬಾಬು ಅವರಿಗೆ ನಂಬಿಸಿದ್ದಾರೆ. ಅನಂತರ ಹಲವು ನಕಲಿ ನಾಯಕರನ್ನು ಭೇಟಿ ಮಾಡಿಸಿ, ಬರೋಬ್ಬರಿ ಐದು ಕೋಟಿ ರೂಪಾಯಿ ಪಡೆಯಲಾಗಿದೆ. ಈ ಸಂಬಂಧ ಚೈತ್ರಾ ಕುಂದಾಪುರ ಹಾಗೂ ಇತರ ಎಂಟು ಮಂದಿಯ ವಿರುದ್ಧ ಎಫ್‌ಐಆರ್‌ ದಾಖಲು ಮಾಡಲಾಗಿದೆ.

Share Post