BengaluruPolitics

ನೀರು ಬಿಡಲು ಡ್ಯಾಂ ಬೀಗ ನಮ್ಮ ಹತ್ತಿರ ಇದೆಯಾ..?; ಡಿ.ಕೆ.ಶಿವಕುಮಾರ್‌ ಪ್ರಶ್ನೆ

ಬೆಂಗಳೂರು; ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಟ್ಟಿರುವುದಕ್ಕೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಈ ಬೆನ್ನಲ್ಲೇ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಏಕೆ ನೀರು ಬಿಟ್ಟಿದ್ದೀರಿ ಅಂದ್ರೆ ಹೇಗೆ..? ನಮ್ಮ ಹತ್ತಿರ ಶಲಾಶಯದ ಬೀಗ ಇದೆಯಾ..? ಎಂದು ಡಿ.ಕೆ.ಶಿವಕುಮಾರ್‌ ಪ್ರಶ್ನೆ ಮಾಡಿದ್ದಾರೆ. ಕೇಂದ್ರ ಸರ್ಕಾರದ ಬಳಿ ಡ್ಯಾಂ ಬೀಗ ಎಂದು ಅವರು ಹೇಳಿದ್ದಾರೆ.

Share Post