BengaluruPolitics

ಕಳ್ಳರ ಬೆಂಬಲ ಕಳ್ಳರಿಗಷ್ಟೇ ಅಲ್ಲವೇ..?; ಬಿಜೆಪಿಗೆ ರಣದೀಪ್‌ ಸುರ್ಜೇವಾಲಾ ಪ್ರಶ್ನೆ

ಬೆಂಗಳೂರು; ಪ್ರಧಾನಿ ನರೇಂದ್ರ ಮೋದಿರುವ ನಿನ್ನೆ ಮಂಡ್ಯಕ್ಕೆ ಬಂದಾಗಿ ರೌಡಿಶೀಟರ್‌ ಹಾಗೂ ನಾಗಮಂಗಲ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಫೈಟರ್‌ ರವಿಗೆ ಕೈಮುಗಿದಿದ್ದರು. ಇದಕ್ಕೆ ಕಾಂಗ್ರೆಸ್‌ ಲೇವಡಿ ಮಾಡಿದೆ. ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಹಾಗೂ ಕರ್ನಾಟಕ ಕಾಂಗ್ರೆಸ್‌ನ ಟ್ವಿಟರ್‌ ಖಾತೆಯಲ್ಲಿ ಈ ಬಗ್ಗೆ ಟ್ವೀಟ್‌ ಮಾಡಲಾಗಿದೆ.

ಸುರ್ಜೇವಾಲಾ ಟ್ವೀಟ್‌

ಭ್ರಷ್ಟಾಚಾರವನ್ನೆ ಉಸಿರಾಗಿಸಿಕೊಂಡಿರುವ #40PercentSarkara ದಲ್ಲಿ ಭ್ರಷ್ಟರಿಗೆ ರಾಜಮರ್ಯಾದೆ! ಕಳ್ಳರ ಬೆಂಬಲ ಕಳ್ಳರಿಗಷ್ಟೆ ಅಲ್ವೇ @BSBommai ? ಪ್ರಧಾನಿಯೇ ರೌಡಿಗೆ ಕೈಮುಗಿಯುವಾಗ ಇವರು ಭ್ರಷ್ಟರಿಗೆ ಬಡ್ತಿ ನೀಡದೆ ಇರುತ್ತಾರ? ಭ್ರಷ್ಟರಿಂದ,ಭ್ರಷ್ಟರಿಗಾಗಿ,ಭ್ರಷ್ಟರಿಗೋಸ್ಕರ #ಭ್ರಷ್ಟೋತ್ಸವ ನಡೆಸುತ್ತಿರುವ ಭ್ರಷ್ಟ ಜನತಾ ಪಾರ್ಟಿ!

ಟ್ವೀಟ್‌-೧

ಪ್ರಧಾನಿ ಮೋದಿಯವರೇ, ನಾವು ಎಂದೂ ಯಾರ ಸಾವನ್ನು ಬಯಸುವುದಿಲ್ಲ. ನೀವು ಆರೋಗ್ಯವಾಗಿರಿ. ದೀರ್ಘಾಯುಷಿ ಆಗಿರಿ. ಹಾಗೇನಾದರೂ ನಿಮಗೆ ತೊಂದರೆ ಆದರೆ ಅದಕ್ಕೆ ಇಂತಹ ರೌಡಿ ಶೀಟರ್ ಗಳನ್ನು ಪಕ್ಷಕ್ಕೆ ಸೇರಿಸಿಕೊಂಡು ನಿಮ್ಮೆದುರು ತಂದು ನಿಲ್ಲಿಸುವ ನಿಮ್ಮ ಪಕ್ಷದವರೇ ಕಾರಣ. ಇಂತಹವರಿಂದ ಸಾಧ್ಯವಾದಷ್ಟು ದೂರವಿರಿ.

ಟ್ವೀಟ್‌-೨

ಎಲ್ಲೇ ಹೋದರೂ ಬಿಜೆಪಿಗೆ ಖಾಲಿ ಕುರ್ಚಿಗಳೇ ಸ್ವಾಗತಿಸುತ್ತವೆ! ಖಾಲಿ ಕುರ್ಚಿಗಳು ಬಿಜೆಪಿ ನಿರ್ನಾಮದ ಕತೆ ಹೇಳುತ್ತವೆ. ಹಣ ನೀಡಿದರೂ, ಏನೇ ಸರ್ಕಸ್ ಮಾಡಿದರೂ ಬಿಜೆಪಿಯತ್ತ ಜನ ಸುಳಿಯದಿರುವುದು ಮಡುಗಟ್ಟಿದ ಜನಾಕ್ರೋಶಕ್ಕೆ ನಿದರ್ಶನ. ಖಾಲಿ ಕುರ್ಚಿ ಕಂಡು ಯಾತ್ರೆ ಮೊಟಕುಗೊಳಿಸುವುದಕ್ಕಿಂತ ನಾಚಿಕೆಗೇಡು ಇನ್ನೇನಿದೆ @BJP4Karnataka?

 

 

Share Post