BengaluruScience

ಇಸ್ರೋ ಭಾರತಕ್ಕೆ ಗೌರವ ತರುವ ಕೆಲಸ ಮಾಡುತ್ತಿದೆ; ಡಿ.ಕೆ.ಶಿವಕುಮಾರ್‌

ಬೆಂಗಳೂರು; ಸೂರ್ಯನ ಅಂಗಳಕ್ಕೆ ಇಂದು ಇಸ್ರೋ ಬಾಹ್ಯಾಕಾಶ ನೌಕೆ ಕಳುಹಿಸುತ್ತಿದೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಇಸ್ರೋ ಕರ್ನಾಟಕದಿಂದ ಭಾರತಕ್ಕೆ ಗೌರವ ತರುವ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಇಸ್ರೋ ವಿಜ್ಞಾನಿಗಳ ಜಗತ್ತೇ ಮೆಚ್ಚುವಂತಹ ಸಾಧನೆಗಳನ್ನು ಮಾಡುತ್ತಿದ್ದಾರೆ. ಅವರು ಸಾಹಸ, ಪ್ರಯೋಗ ಎರಡನ್ನೂ ಮಾಡುತ್ತಿದ್ದಾರೆ. ಇಸ್ರೋ ಕೈಗೊಂಡಿರುವ ಸೂರ್ಯಯಾನ ಆದಿತ್ಯ-ಎಲ್‌೧ ಯಶಸ್ವಿಯಾಗಲಿ ಎಂದು ಡಿ.ಕೆ.ಶಿವಕುಮಾರ್‌ ಹಾರೈಸಿದರು.

 

Share Post