BengaluruCrime

ಇಸ್ರೋ ವಿಜ್ಞಾನಿ ಕಾರಿಗೆ ಕಲ್ಲು ತೂರಿದ ದುಷ್ಕರ್ಮಿಗಳು

ಬೆಂಗಳೂರು; ದುಷ್ಕರ್ಮಿಗಳು ಇಸ್ರೋ ವಿಜ್ಞಾನಿಯೊಬ್ಬರ ಕಾರನ್ನು ಹಿಂಬಾಲಿಸಿ, ಕಾರಿಗೆ ಕಲ್ಲೆಸೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ರತನಹಳ್ಳಿ ಮುಖ್ಯರಸ್ತೆಯಲ್ಲಿ ಆಗಸ್ಟ್‌ 24 ರ ರಾತ್ರಿ ಈ ಕೃತ್ಯ ಎಸಗಲಾಗಿದೆ.

ಇಸ್ರೋ ವಿಜ್ಞಾನಿ ಅಶುತೋಷ್‌ ಸಿಂಗ್‌ ಅವರು ಅಂದು ರಾತ್ರಿ 12.45ರ ಸುಮಾರಿಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಕೆಲ ಗೂಂಡಾಗಳು ಅವರ ಕಾರನ್ನು ಹಿಂಬಾಲಿಸಿದ್ದಾರೆ. ಕಾರನ್ನು ಅಡ್ಡಗಟ್ಟಿ ನಿಲ್ಲಿಸಿದ್ದು, ಕಾರಿನ ಹಿಂಭಾಗದ ಗಾಜನ್ನು ಒಡೆದಿದ್ದಾರೆ. ಅನಂತರ ಅಶುತೋಷ್‌ ಅವರು ಹೇಗೋ ತಪ್ಪಿಸಿಕೊಂಡು ಹೋಗಿದ್ದಾರೆ.

ಮಾರನೆಯ ದಿನ ಇಸ್ರೋ ವಿಜ್ಞಾನಿ ಅಶುತೋಷ್‌ ಅವರು ಪೊಲೀಸರಿಗೆ ದೂರು ನೀಡಲು ಮುಂದಾದರೂ, ಪೊಲೀಸರು ನಿರ್ಲಕ್ಷ್ಯ ತೋರಿಸಿದ್ದಾರೆ. ಹೀಗಾಗಿ ಅವರು ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅನಂತರ ಎಚ್ಚೆತ್ತುಕೊಂಡ ಮಾದನಾಯಕನಹಳ್ಳಿ ಠಾಣೆ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

 

Share Post