BengaluruPolitics

ಗ್ಯಾರೆಂಟಿಗಳನ್ನು ಷರತ್ತಿಲ್ಲದೆ ಜಾರಿ ಮಾಡಿ; ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ

ಬೆಂಗಳೂರು; ಕಾಂಗ್ರೆಸ್‌ ಕೊಟ್ಟಿರುವ ಗ್ಯಾರೆಂಟಿಗಳನ್ನು ಯಾವುದೇ ಷರತ್ತಿಲ್ಲದೆ ಜಾರಿ ಮಾಡಬೇಕೆಂದು ಆಗ್ರಹಿಸಿ ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಮಾಜಿ ಶಾಸಕರು, ಬಿಜೆಪಿಯ ಹಲವು ನಾಯಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಇದಕ್ಕೂ ಮೊದಲು ಮಾತನಾಡಿರುವ ಮಾಜಿ ಸಿಎಂ ಯಡಿಯೂರಪ್ಪ ಅವರು, ಕಾಂಗ್ರೆಸ್ ಪಕ್ಷ ಚುನಾವಣೆ ಸಮಯದಲ್ಲಿ ಏನು ಗ್ಯಾರಂಟಿ ಕೊಟ್ಟಿದೆ, ಅದನ್ನು ಯಾವುದೇ ಷರತ್ತಿಲ್ಲದೆ ಘೋಷಣೆ ಮಾಡಬೇಕು. ಗೋ ಹತ್ಯೆ ಕಾಯಿದೆಗೆ ತಿದ್ದುಪಡಿ ತರಬಾರದು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್​, ಮಾಜಿ ಸಿಎಂ ಡಿ.ವಿ.ಸದಾನಂದಗೌಡ​, ಗೋಪಾಲಯ್ಯ, ಬಿ.ಸಿ.ನಾಗೇಶ್, ಎನ್‌.ಮಹೇಶ್​, ವಿಶ್ವೇಶ್ವರ ಹೆಗಡೆ ಕಾಗೇರಿ, ಸೋಮಶೇಖರ್ ರೆಡ್ಡಿ, ಎನ್​​.ರವಿಕುಮಾರ್ ಮುಂತಾದವರು ಪಾಲ್ಗೊಂಡಿದ್ದಾರೆ.

 

Share Post