BengaluruDistrictsPolitics

ಕೋಟ್ಯಂತರ ಖರ್ಚು ಮಾಡಿ ಆಪರೇಷನ್‌ ಮಾಡಿದವರು ಬಿಜೆಪಿಗರು; ಸಿಎಂ ಆಕ್ರೋಶ

ಮೈಸೂರು; ಬಿಜೆಪಿ ನಾಯಕರು ರಾಜ್ಯ ಸರ್ಕಾರವನ್ನು ಎಟಿಎಂ ಸರ್ಕಾರ ಎಂದು ಮೂದಲಿಸುತ್ತಿದ್ದಾರೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ. ಬಿಜೆಪಿಗೆ ಮಾನ ಮರ್ಯಾದೆ ಇದೆಯಾ ಎಂದೂ ಸಿಎಂ ಪ್ರಶ್ನೆ ಮಾಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿರುವ ಅವರು, ಕೋಟ್ಯಾಂತರ ರೂಪಾಯಿ ಹಣದಲ್ಲಿ ಆಪರೇಷನ್ ಕಮಲ ಮಾಡಿದವರು ನಮ್ಮ ಬಗ್ಗೆ ಮಾತಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಆರ್ಥಿಕವಾಗಿ ದಿವಾಳಿ ಆಗಲು ಹಿಂದಿನ ಬಿಜೆಪಿ ಸರ್ಕಾರವೇ ಕಾರಣ ಎಂದಿರುವ ಸಿದ್ದರಾಮಯ್ಯ, ರಾಜ್ಯದಲ್ಲಿ ವಿದ್ಯುತ್‌ ಸಮಸ್ಯೆಗೂ ಬಿಜೆಪಿಯೇ ಕಾರಣ ಎಂದಿದ್ದಾರೆ. ಬಿಜೆಪಿ ಆಡಳಿತ ಅವಧಿಯಲ್ಲಿ ಒಂದು ಮೆಗಾವ್ಯಾಟ್ ವಿದ್ಯುತ್ ಕೂಡಾ ಉತ್ಪಾದನೆ ಮಾಡಿಲ್ಲ. ಬಿಜೆಪಿಗೆ ಕಾಂಗ್ರೆಸ್ ಬಗ್ಗೆ ಮಾತಾಡಲು ನೈತಿಕತೆ ಇಲ್ಲ ಎಂದೂ ಸಿದ್ದರಾಮಯ್ಯ ಹೇಳಿದ್ದಾರೆ.

Share Post