BengaluruPolitics

ರಾಜ್ಯಸಭಾ ಚುನಾವಣೆಯಲ್ಲಿ ಅಡ ಮತದಾನ; ಇಬ್ಬರು ಶಾಸಕರ ಅನರ್ಹತೆಗೆ ಜೆಡಿಎಸ್‌ ದೂರು

ಬೆಂಗಳೂರು; ರಾಜ್ಯಸಭಾ ಚುನಾವಣೆಯಲ್ಲಿ  ಗುಬ್ಬಿ ಶಾಸಕ ಶ್ರೀನಿವಾಸ್ ಹಾಗೂ ಕೋಲಾರದ ಶ್ರೀನಿವಾಸ್ ಗೌಡ ಅವರು ಅಡ್ಡ ಮತದಾನ ಮಾಡಿದ್ದು, ಪಕ್ಷದ ವಿಪ್‌ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಬ್ಬರನ್ನು ಅನರ್ಹಗೊಳಿಸುವಂತೆ ಜೆಡಿಎಸ್ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ದೂರು ನೀಡಿದೆ.

 

ವಿಧಾನಸೌಧದಲ್ಲಿ ಸ್ಪೀಕರ್ ಭೇಟಿ ಮಾಡಿದ ಜೆಡಿಎಸ್‌ ಮುಖ್ಯ ಸಚೇತಕ ವೆಂಕಟರಾವ್ ನಾಡಗೌಡ, ಶಾಸಕರಾದ ಶ್ರೀನಿವಾಸ ಗೌಡ ಹಾಗೂ ಶ್ರೀನಿವಾಸ್‌ ಅವರನ್ನು ಅನರ್ಹ ಮಾಡುವಂತೆ ದೂರು ಸಲ್ಲಿಸಿದ್ದಾರೆ. ಅನಂತರ ಮಾತನಾಡಿದ ಅವರು, ಇಬ್ಬರೂ ಶಾಸಕರು ಕಳೆದ ಕೆಲವು ದಿನಗಳಿಂದ ನಮ್ಮ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದಾರೆ. ಶ್ರೀನಿವಾಸಗೌಡರು ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿದ್ದಾರೆ. ಬಹಿರಂಗ ಹೇಳಿಕೆಗಳನ್ನು ಕೊಟ್ಟಿದ್ದಾರೆ. ಹೀಗಾಗಿ ಎಲ್ಲಾ ದಾಖಲೆಗಳ ಸಮೇತ ದೂರು ನೀಡಲಾಗಿದೆ. ಸ್ಪೀಕರ್ ಕೂಡ ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆಂದು ಭರವಸೆ ಕೊಟ್ಟಿದ್ದಾರೆ ಎಂದಿದ್ದಾರೆ.

Share Post