BengaluruCrime

ಮನೆಗೆ ಹೊರಟವ ಮಸಣ ಸೇರಿದ

ಬೆಂಗಳೂರು:ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಭೀಕರ ಹತ್ಯೆಮಾಡಿದ ಘಟನೆ ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ, ಜ್ಞಾನಭಾರತಿ ಸಮೀಪದ ಮಂಗನಪಾಳ್ಯ ಬಳಿ ನಡೆದಿದೆ. ಕಾರ್ಪೆಂಟರ್ ಕೆಲಸ ಮಾಡಿಕೊಂಡಿದ್ದ ದಿನೇಶ್ (46) ಎಂಬಾತನನ್ನ ಬೀಕರವಾಗಿ ಕೊಲೆಮಾಡಲಾಗಿದೆ.

ನಿನ್ನೆ ಕೆಲಸ ಮುಗಿಸಿಕೊಂಡು ಮನೆಗೆ ಹೋಗ್ತಿದ್ದ ವೇಳೆ ಆತನ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. ಕೆಲಸ ಮುಗಿಸಿ ಬೈಕ್ ನಲ್ಲಿ ಮನೆಗೆ ತೆರಳುತಿದ್ದಾಗ ನಾಲ್ಕೈದು ಮಂದಿಯ ಗುಂಪೊಂದು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಕೂಡಲೆ ಸ್ಥಳಕ್ಕೆ ಜ್ಞಾನಭಾರತಿ ಪೊಲೀಸ್ರು ಭೇಟಿನೀಡಿ ಪರಿಶೀಲನೆ ನಡೆಸಿ ಕೊಲೆ ಮಾಡಿದವರ ಬೆನ್ನುಹತಿದ್ದಾರೆ. ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿನೀಡಿ ತೀವ್ರ ಪರಿಶೀಲನೆ ಮಾಡಿದರು.

Share Post