BengaluruPolitics

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಸನ್ನ ಬಿ.ವರಾಳೆ ನೇಮಕ

ನವದೆಹಲಿ; ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ಬಾಂಬೆ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಪ್ರಸನ್ನ.ಬಿ.ವರಾಳೆ ಅವರನ್ನು ನೇಮಕ ಮಾಡಲಾಗಿದೆ. ಇನ್ನು ಜಮ್ಮು-ಕಾಶ್ಮೀರ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದ ಎ.ಎಂ.ಮಾರ್ಗೇಗೆ ಬಡ್ತಿ ನೀಡಿದ್ದು, ಅದೇ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ. ಜಮ್ಮು-ಕಾಶ್ಮೀರದ ಮುಖ್ಯ ನ್ಯಾಯಾಮೂರ್ತಿಯಾಗಿದ್ದ ಪಂಕಜ್‌ ಮಿತ್ತಲ್‌ ಅವರನ್ನು ರಾಜಸ್ಥಾನ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿದೆ.

ಕೇಂದ್ರ ಕಾನೂನು ಸಚಿವ ಕಿರಣ್‌ ರಿಜುಜು ಈ ಬಗ್ಗೆ ಟ್ವೀಟ್‌ ಮಾಡಿ ಮಾಹಿತಿ ನೀಡಿದ್ದಾರೆ. ʻಸಾಂವಿಧಾನಿಕ ನಿಬಂಧನೆಗಳ ಅನುಸಾರ ನ್ಯಾ. ಪಂಕಜ್‌ ಮಿತ್ತಲ್‌ ಅವರನ್ನು ರಾಜಸ್ಥಾನ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ವರ್ಗಾವಣೆ ಮಾಡಲಾಗಿದೆ. ನ್ಯಾ. ಪಿ.ಬಿ. ವರಾಳೆ ಅವರನ್ನು ಕರ್ನಾಟಕ ಹೈಕೋರ್ಟ್‌ ಮತ್ತು ನ್ಯಾ.ಎ.ಎಂ. ಮಾರ್ಗೇ ಅವರನ್ನು ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಲಾಗಿದೆ’ ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

Share Post