Bengaluru

ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ; ಸೂಕ್ತ ಸಮಯದಲ್ಲಿ ನಿರ್ಧಾರ – ಅಶೋಕ್

ಬೆಂಗಳೂರು; ಚಾಮರಾಜ ಪೇಟೆ ಮೈದಾನ ವಿವಾದ ಶುರುವಾದ ನಂತರ ಸರ್ಕಾರದಿಂದಲೇ ಇಲ್ಲಿ ಸ್ವಾತಂತ್ರ್ಯ ದಿನಾಚರಣೆ ಮಾಡಲಾಗಿತ್ತು. ಇದೀಗ ಗಣೇಶೋತ್ಸವವನ್ನೂ ಮಾಡಬೇಕೆಂಬ ಬೇಡಿಕೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಚಿವ ಆರ್‌.ಅಶೋಕ್‌ ಈ ಬಗ್ಗೆ ಹೇಳಿಕೆ ನೀಡಿದ್ದಾರೆ.

ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ಕೊಡುವ ಬಗ್ಗೆ ಸೂಕ್ತ ಸಮಯದಲ್ಲಿ, ಸೂಕ್ತ ಕಾಲದಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕಂದಾಯ ಸಚಿವ ಆರ್‌. ಅಶೋಕ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವ್ರು, ಇದೊಂದು ಸೂಕ್ಷ್ಮ ವಿಚಾರವಾಗಿದೆ. ಅನುಮತಿ ಬೇಕು ಅಂತ ಈವರೆಗೂ ನನಗೆ ಯಾವುದೇ ಮನವಿಗಳು ಬಂದಿಲ್ಲ. ಡಿಸಿಗೆ ಮನವಿ ಕೊಟ್ಟಿದ್ದರೆ ಅವರು ಆ ಬಗ್ಗೆ ಸೂಕ್ತ ಸೂಚನೆ ಕೊಡುತ್ತಾರೆ ಎಂದು ತಿಳಿಸಿದರು.

ಗಣೇಶೋತ್ಸವದ ಬಗ್ಗೆ ನಾನು ಗಂಭೀರವಾಗಿ ಆಲೋಚನೆ ಮಾಡುತ್ತಿದ್ದೇನೆ. ಕಾನೂನು ಸುವ್ಯವಸ್ಥೆ ಬಹಳ ಪ್ರಮುಖ. ಗಣೇಶ ಕೂರಿಸುವ ಸಂಬಂಧ ಇಂದು ಪೊಲೀಸರು, ಬಿಬಿಎಂಪಿ ಅಧಿಕಾರಿಗಳು ಸಭೆ ಮಾಡ್ತಿದ್ದಾರೆ. ಚಾಮರಾಜಪೇಟೆ ಗಣೇಶೋತ್ಸವ ವಿಚಾರ ಗಂಭೀರವಾಗಿ ಚಿಂತನೆ ಮಾಡಬೇಕಿದೆ ಸಚಿವ ಆರ್‌.ಅಶೋಕ್‌ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

Share Post