BengaluruPolitics

ನನಗೆ ಉತ್ಸವ ಬೇಡ, ದೇಶಕ್ಕೆ-ಕಾಂಗ್ರೆಸ್‌ಗೆ ಉತ್ಸವ ಬೇಕು; ಡಿ.ಕೆ.ಶಿವಕುಮಾರ್‌

ಬೆಂಗಳೂರು; ನನಗೆ ಯಾವ ಉತ್ಸವವೂ ಬೇಡ. ಕಾಂಗ್ರೆಸ್ ಪಕ್ಷಕ್ಕೆ ಹಾಗೂ ದೇಶಕ್ಕೆ ಉತ್ಸವ ಬೇಕು. ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಅದೇ ನನ್ನ ಗುರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಿವಕುಮಾರೋತ್ಸವ ಮಾಡಬೇಕೆಂದು ಅಭಿಮಾನಿಗಳು ಪತ್ರ ಬರೆದಿರುವುದಕ್ಕೆ ಈ ರೀತಿಯಾಗಿ ಉತ್ತರ ಕೊಟ್ಟರು.

ನನ್ನ ಹುಟ್ಟುಹಬ್ಬದ ಸಮಯದಲ್ಲಿ ಕೂಡಾ ಅಭಿಮಾನಿಗಳು ಜಾಹೀರಾತು ನೀಡುತ್ತೇವೆ ಎಂದರು. ಆಗಲೂ ನಾನು ಬೇಡ ಎಂದಿದ್ದೆ. ನನ್ನ ಕುಟುಂಬದ ಸಮೇತ ಕೇದಾರನಾಥಕ್ಕೆ ಹೋಗಿ ಅಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿ ಬಂದೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು. ನಾನು ಕೆಪಿಸಿಸಿ ಅಧ್ಯಕ್ಷನಾಗಿ ಅಧಿಕಾರ ತೆಗೆದುಕೊಂಡ ದಿನವೇ, ಯಾರೂ ಕೂಡ ನನ್ನ ಪೂಜೆ ಮಾಡಬೇಡಿ, ಪಕ್ಷ ಪೂಜೆ ಮಾಡಿ ಎಂದು ಹೇಳಿದ್ದೆ. ಈಗಲೂ ಅದಕ್ಕೆ ಬದ್ಧನಾಗಿದ್ದೇನೆ ಎಂದರು.

Share Post