Bengaluru

Karnataka Bandh; ಕರ್ನಾಟಕ ಬಂದ್‌ಗೆ ಚಿತ್ರರಂಗ ಬೆಂಬಲ, ಪ್ರತಿಭಟನೆ

ಬೆಂಗಳೂರು; ಕರ್ನಾಟಕ ಬಂದ್‌ಗೆ ಚಿತ್ರರಂಗ ಬೆಂಬಲ ಕೊಟ್ಟಿದೆ. ಚಲನಚಿತ್ರ ವಾಣಿಜ್ಯ ಮಂಡಳಿ ಬಳಿ ಚಿತ್ರರಂಗದ ನೂರಾರು ಕಲಾವಿದರು ಪ್ರತಿಭಟನೆ ಮಾಡುತ್ತಿದ್ದಾರೆ. ಸುಮಾರು 500ಕ್ಕೂ ಹೆಚ್ಚು ಕಲಾವಿದರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಹಲವಾರು ಹಿರಿಯ ಹಾಗೂ ಹಿರಿಯ ನಟನಟಿಯರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ತಂತ್ರಜ್ಞರು ಕೂಡಾ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅವರು ಈ ಪ್ರತಿಭಟನೆಯ ನೇತೃತ್ವ ವಹಿಸಿದ್ದಾರೆ.

Share Post