Bengaluru

ಸಿದ್ದರಾಮಯ್ಯಗೆ ಕರ್ನಾಟಕ ದರ್ಶನ ಮಾಡಿಸುತ್ತಂತೆ ಬಿಜೆಪಿ..!

ಬೆಂಗಳೂರು: ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಬಿಜೆಪಿ ಪಕ್ಷ ವಲಸೆ ರಾಮಯ್ಯ ಎಂದು ಕರೆದಿದೆ. ವಲಸೆ ರಾಮಯ್ಯ ಎಂಬ ಹ್ಯಾಷ್‌ಟ್ಯಾಗ್‌ನೊಂದಿಗೆ ಬಿಜೆಪಿ ಟ್ವೀಟ್‌ ಮಾಡಿದ್ದು, ಸಿದ್ದರಾಮಯ್ಯ ಅವರು ಕರ್ನಾಟಕ ದರ್ಶನ ಮಾಡೋದಾದ್ರೆ, ಪ್ರವಾಸೋದ್ಯಮ ಇಲಾಖೆಯಿಂದ ಪ್ಯಾಕೇಜ್‌ ಟೂರ್‌ ವ್ಯವಸ್ಥೆ ಮಾಡಿಕೊಡುತ್ತೇವೆ ಎಂದು ಲೇವಡಿ ಮಾಡಿದೆ.

ಈ ಬಾರಿ ಕೊನೆಯ ಚುನಾವಣೆ ಎನ್ನುತ್ತಿದ್ದೀರಿ. ಈ ಬಾರಿ ಎಲ್ಲಿಂದ ಸ್ಪರ್ಧಿಸುತ್ತೀರಿ ಎಂದು ಇತ್ತೀಚೆಗೆ ಮೈಸೂರಿನಲ್ಲಿ ಪತ್ರಕರ್ತರು ಸಿದ್ದರಾಮಯ್ಯರನ್ನು ಕೇಳಿದ್ದರು. ಇದಕ್ಕೆ ಉತ್ತರಿಸಿದ್ದ ಸಿದ್ದರಾಮಯ್ಯ, ವರುಣಾ, ಹುಣಸೂರು, ಚಾಮರಾಜಪೇಟೆ, ಬಾದಾಮಿ, ಕೋಲಾರ, ಹೆಬ್ಬಾಳ, ಕೊಪ್ಪಳ, ಚಾಮುಂಡೇಶ್ವರಿ ಸೇರೆ ವಿವಿಧ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವಂತೆ ಬೆಂಬಲಿಗರು ಆಹ್ವಾನ ನೀಡುತ್ತಿದ್ದಾರೆ. ಆದ್ರೆ, ಈ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ ಎಂದು ಹೇಳಿದ್ದರು. ಇದಕ್ಕೆ ಬಿಜೆಪಿ ಟ್ವೀಟ್‌ ಮೂಲಕ ಲೇವಡಿ ಮಾಡಿದೆ.

ಬಿಜೆಪಿ ಮಾಡಿರುವ ಟ್ವೀಟ್‌ಗಳಲ್ಲೇನಿದೆ..?

ಟ್ವೀಟ್‌-೧

ಮಾನ್ಯ ವಲಸೆರಾಮಯ್ಯ ಅವರೇ, ಯಾವುದು ಹಿತವು ನಿಮಗೆ? ಪಟ್ಟ ಶಿಷ್ಯ ಜಮೀರನ ಜಹಾಗೀರ್ ಚಾಮರಾಜಪೇಟೆಯೊ? ಈಗಿನ ಕ್ಷೇತ್ರ ಬಾದಾಮಿಯೋ? ಇಲ್ಲ 2018 ಚುನಾವಣೆಯೇ ನಿಮ್ಮ ಕೊನೆಯ ಚುನಾವಣೆ ಅಂದುಕೊಳ್ಳುವುದೋ? ವಲಸೆ ನಾಯಕ ಸಿದ್ದರಾಮಯ್ಯ ಅವರೇ, ಉತ್ತರಿಸುವಿರಾ? ಎಂದಿದೆ.

ಟ್ವೀಟ್‌-೨

ಸಿದ್ದರಾಮಯ್ಯ ಅವರಿಗೆ ಕರ್ನಾಟಕ ದರ್ಶನ ಮಾಡುವ ಆಸೆಯಿದ್ದರೆ ಪ್ರವಾಸೋದ್ಯಮ ಇಲಾಖೆಯ ಮೂಲಕ ಹಲವು ಪ್ಯಾಕೇಜ್ ಪ್ರವಾಸದ ವ್ಯವಸ್ಥೆ ಮಾಡುತ್ತೇವೆ. ಅದನ್ನು ಬಿಟ್ಟು ಹಳೆ ಮೈಸೂರು, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ, ಬೆಂಗಳೂರು ಎಂದು ವಲಸೆ ಹೋಗಬಹುದಾದ ಕ್ಷೇತ್ರಗಳ ಪಟ್ಟಿ ಮಾಡಿದರೆ ಡಿ.ಕೆ.ಶಿವಕುಮಾರ್ ಸುಮ್ಮನಿರುವರೇ?

Share Post