Bengaluru

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಚಿತ್ರ ನಿರ್ದೇಶಕ ಎಸ್‌.ನಾರಾಯಣ್‌

ಬೆಂಗಳೂರು: ಚುನಾವಣೆ ಹತ್ತಿರವಾಗುತ್ತಿರುವುದರಿಂದ ಪಕ್ಷ ಬಿಡುವವರು, ಪಕ್ಷಗಳನ್ನು ಸೇರುವವರು ಹೆಚ್ಚಾಗುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಸಿನಿಮಾ ಮಂದಿ ಕೂಡಾ ಹಲವು ಪಕ್ಷಗಳ ಕೈ ಹಿಡಿಯುತ್ತಾರೆ. ಈ ಬಾರಿ ಚಿತ್ರ ನಿರ್ದೇಶಕ ಎಸ್‌.ನಾರಾಯಣ್‌ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇವರ ಜೊತೆಗೆ ರಾಜ್ಯ ಪಿಯು ಉಪನ್ಯಾಸಕರ ಸಂಘದ ಮಾಜಿ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಕೂಡಾ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇಬ್ಬರನ್ನೂ ಪಕ್ಷಕ್ಕೆ ಬರಮಾಡಿಕೊಂಡರು.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಇಬ್ಬರಿಗೂ ಕಾಂಗ್ರೆಸ್‌ ಧ್ವಜ ನೀಡಿ ಶಿವಕುಮಾರ್‌ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್‌, ಬಹುಮುಖ ಪ್ರತಿಭೆ, ಸರಳ ವ್ಯಕ್ತಿತ್ವದ ನಾರಾಯಣ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಪಕ್ಷದ ತತ್ವ, ಸಿದ್ಧಾಂತ ಒಪ್ಪಿ ಅವರು ಪಕ್ಷ ಸೇರಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಸಿನಿಮಾ ಕ್ಷೇತ್ರ ಮತ್ತು ತಮ್ಮ ಸಮುದಾಯದ ಸಂಘಟನೆ ಮಾಡಲಿದ್ದಾರೆ. ಕಾಂಗ್ರೆಸ್‌ ಸೇರುವವರ ದೊಡ್ಡ ಪಟ್ಟಿಯೇ ನನ್ನಲ್ಲಿದೆ. ಅವರೆಲ್ಲರ ಸೇರ್ಪಡೆಗೆ ದಿನ ನಿಗದಿಪಡಿಸಬೇಕಿದೆ ಎಂದರು.

Share Post