Bengaluru

ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿ ವೇತನಕ್ಕೆ ತಡೆ

ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಅವರ ವೇತನವನ್ನು ತಡೆ ಹಿಡಿಯುವಂತೆ ಹೈಕೋರ್ಟ್ ಆದೇಶಿಸಿದೆ. ಧಾರವಾಡ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಗೆ (ಡಿಮ್ಹಾನ್ಸ್) ಎಂಆರ್‌ಐ ಮೆಷಿನ್ ಅಳವಡಿಸುವಲ್ಲಿ ವಿಳಂಬ ಧೋರಣೆ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಹೈಕೋರ್ಟ್‌ ನವೀನ್‌ ರಾಜ್‌ ಅವರ ಸಂಬಳ ತಡೆಹಿಡಿಯುವಂತೆ ಸೂಚಿಸಿ ಆದೇಶ ಹೊರಡಿಸಿದ್ದಾರೆ.

ಡಿಮ್ಹಾನ್ಸ್‌ಗೆ ಅಗತ್ಯ ಸೌಲಭ್ಯ ಒದಗಿಸುವಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್‌ ಸ್ವಯಂಪ್ರೇರಿತವಾಗಿ ಕೇಸ್‌ ದಾಖಲಿಸಿಕೊಂಡಿತ್ತು. ಇದರ ವಿಚಾರಣೆ ನಡೆಸಿದ ಕೋರ್ಟ್‌ ಸರ್ಖಾರವನ್ನು ತರಾಟೆಗೆ ತೆಗೆದುಕೊಂಡಿದೆ. ಎಂಆರ್‌ಐ ಮಷಿನ್ ಅಳವಡಿಕೆಯಾಗಿ, ಕಾರ್ಯಾರಂಭ ಮಾಡುವ ತನಕ ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿಯ ವೇತನ ಬಿಡುಗಡೆ ಮಾಡಬಾರದು ಎಂದು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಆದೇಶಿಸಿದರು. ಜೊತೆಗೆ ವಿಚಾರಣೆಯನ್ನು ಏಪ್ರಿಲ್‌ 21ಕ್ಕೆ ಮುಂದೂಡಿದರು.

Share Post