Bengaluru

ಡಿಜಿಪಿ ಡಾ.ಪಿ.ರವೀಂದ್ರನಾಥ್‌ ತಮ್ಮ ಹುದ್ದೆಗೆ ರಾಜೀನಾಮೆ

ಬೆಂಗಳೂರು: ರಾಜ್ಯ ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಡಾ.ಪಿ.ರವೀಂದ್ರನಾಥ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ಸಂಬಂದ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.

ಡಿಸಿಆರ್‌ಇ ಡಿಜಿಪಿ ಆಗಿದ್ದ ರವೀಂದ್ರನಾಥ್ ಅವರನ್ನು ಇತ್ತೀಚೆಗಷ್ಟೇ ಪೊಲೀಸ್ ತರಬೇತಿ ವಿಭಾಗಕ್ಕೆ ವರ್ಗಾಯಿಸಲಾಗಿತ್ತು. ಆದ್ರೆ ಕುಟುಂಬದ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಬೇಕಿದ್ದರಿಂದ ರವೀಂದ್ರನಾಥ್‌ ಕೆಲದಿನಗಳ ಕಾಲ ರಜೆ ಪಡೆದಿದ್ದರು. ನಂತರ ಸೋಮವಾರವಷ್ಟೇ ಅಧಿಕಾರ ವಹಿಸಿಕೊಂಡಿದ್ದರು. ಆದ್ರೆ ಇಂದು ಬೆಳಗ್ಗೆ
ಅರಮನೆ ರಸ್ತೆಯಲ್ಲಿರುವ ಪೊಲೀಸ್ ತರಬೇತಿ ವಿಭಾಗದ ಕಚೇರಿಗೆ ಭೇಟಿ ನೀಡಿದ್ದ ರವೀಂದ್ರನಾಥ್, ಅಲ್ಲಿಂದ ವಿಧಾನಸೌಧಕ್ಕೆ ಹೋಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರ ಸ್ವೀಕರಿಸಿರುವ ಕಾರ್ಯದರ್ಶಿ, ಮುಂದಿನ ಕ್ರಮಕ್ಕಾಗಿ ಪರಿಶೀಲಿಸುತ್ತಿದ್ದಾರೆ.

Share Post