Bengaluru

ಕೋಮು ದ್ವೇಷ ಸೃಷ್ಟಿಸಿ ಅಧಿಕಾರಕ್ಕೆ ಬರುವ ಭ್ರಮೆ; ಬಿಜೆಪಿ ವಿರುದ್ಧ ಡಿಕೆಶಿ ಕಿಡಿ

ಬೆಂಗಳೂರು: ಚುನಾವಣೆ ಹತ್ತಿರವಾಗುತ್ತಿರುವುದರಿಂದ ಬಿಜೆಪಿಯವರು ರಾಜ್ಯದಲ್ಲಿ ಕೋಮು ದ್ವೇಷ ಸೃಷ್ಟಿ ಮಾಡುತ್ತಿದ್ದಾರೆ. ಆ ಮೂಲಕ ಅವರು ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪ ಮಾಡಿದ್ದಾರೆ. ಈ ಬಗ್ಗೆ ಡಿ.ಕೆ.ಶಿವಕುಮಾರ್‌ ಮಾತನಾಡಿರುವ ವಿಡಿಯೋವನ್ನು ಕಾಂಗ್ರೆಸ್‌ ತನ್ನ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದೆ.

ಮಾವು ಮಾರಾಟ ವಿವಾದ ಬಿಜೆಪಿಯ ರಾಜಕೀಯ ಅಜೆಂಡಾ ಆಗಿದೆ. ಈ ಮೂಲಕ ರೈತರ ಬದುಕಿಗೆ ಸಮಾಧಿ ಕಟ್ಟಲು ಬಿಜೆಪಿ ಹೊರಟಿದೆ ಎಂದು ವಿಡಿಯೋದಲ್ಲಿ ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ. ಈ ವಿವಾದದಿಂದ ರೈತರಿಗೆ ನಷ್ಟವಾದರೆ ಸರ್ಕಾರ ಭರಿಸುತ್ತದೆಯೇ? ಎಂದೂ ಪ್ರಶ್ನೆ ಮಾಡಿದ್ದಾರೆ.

Share Post