Bengaluru

ನವೆಂಬರ್‌ 1 ರಂದು ಪುನೀತ್‌ಗೆ ಮರಣೊತ್ತರ ಕರ್ನಾಟಕ ರತ್ನ ಗೌರವ

ಬೆಂಗಳೂರು; ದಿವಂಗತ ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಮರಣೋತ್ತರವಾಗಿ ನವೆಂಬರ್‌ 1 ರಂದು ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಲಾಲ್‌ ಬಾಗ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಹಿಂದೆ ನಾನು ಪುನೀತ್‌ಗೆ ಕರ್ನಾಟಕ ರತ್ನ ನೀಡುವುದಾಗಿ ಘೋಷಣೆ ಮಾಡಿದ್ದೆ. ಅದರಂತೆ ನವೆಂಬರ್‌ 1 ರಂದು ಅವರಿಗೆ ಕರ್ನಾಟಕ ರತ್ನ ಗೌರವ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಇದಕ್ಕಾಗಿ ಒಂದು ಸಣ್ಣ ಸಮಿತಿಯನ್ನು ರಚನೆ ಮಾಡಲಾಗಿದೆ. ಈ ಸಮಿತಿಯಲ್ಲಿ ಪುನೀತ್‌ ಕುಟುಂಬದ ಸದಸ್ಯರು ಕೂಡಾ ಇರಲಿದ್ದಾರೆ ಎಂದು ಸಿಎಂ ಬೊಮ್ಮಾಯಿ ಇದೇ ವೇಳೆ ತಿಳಿಸಿದರು.

Share Post