Bengaluru

ನಾಳೆ ರಾಜ್ಯದ ಸಂಸದರ ಮನೆಗಳಿಗೆ ಮುತ್ತಿಗೆ ಹಾಕಲು ಕರವೇ ನಿರ್ಧಾರ

ಬೆಂಗಳೂರು; ಕಾವೇರಿ ಹೋರಾಟ ಬಿರುಸು ಪಡೆಯುತ್ತಿದೆ. ರಾಜ್ಯದ ಹಲವೆಡೆ ಇಂದು ಪ್ರತಿಭಟನೆಗಳು ನಡೆದಿದೆ. ಇನ್ನು ನಾಳೆ ಪ್ರತಿಭಟನೆ ಮತ್ತಷ್ಟು ಜೋರಾಗುವ ಸಾಧ್ಯತೆ ಇದೆ. ನಾಳೆ ಮಂಡ್ಯ ನಗರ ಬಂದ್‌ಗೆ ಕರೆ ನೀಡಲಾಗಿದೆ. ಇನ್ನೊಂದೆಡೆ ರಾಜ್ಯದ ಎಲ್ಲಾ ಸಂಸದರ ನಿವಾಸಗಳಿಗೆ ಮುತ್ತಿಗೆ ಹಾಕಲು ಕರವೇ ತೀರ್ಮಾನ ಮಾಡಿದೆ.

ಕರವೇ ಯುವಘಟಕದ ರಾಜ್ಯಾಧ್ಯಕ್ಷ ಧರ್ಮರಾಜ್ ಗೌಡ ನೇತೃತ್ವದಲ್ಲಿ ಇಂದು ಬೆಂಗಳೂರಿನ ವಿಜಯನಗರದ ಟೋಲ್‌ಗೇಟ್‌ ಬಳಿ ಪ್ರತಿಭಟನೆ ನಡೆಯಿತು. ಇದೇ ವೇಳೇ ಮಾತನಾಡಿರುವ ಧರ್ಮರಾಜ್‌ ಅವರು, ನಮಗೆ ಕುಡಿಯುವುದಕ್ಕೇ ನೀರಿಲ್ಲ. ಆದ್ರೆ ತಮಿಳುನಾಡಿನವರು ಬೆಳೆ ಬೆಳೆಯೋದಕ್ಕೆ ನೀರು ಕೇಳುತ್ತಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಸರ್ಕಾರ ಈ ವಿಚಾರದಲ್ಲಿ ಮಧ್ಯೆ ಪ್ರವೇಶ ಮಾಡಬೇಕು. ಈ ಹಿನ್ನೆಲೆಯಲ್ಲಿ ನಾಳೆ ರಾಜ್ಯದ ಎಲ್ಲಾ ಸಂಸದರ ಮನೆಗಳಿಗೆ ಮುತ್ತಿಗೆ ಹಾಕಲಾಗುವುದು ಎಂದಿದ್ದಾರೆ.

 

Share Post