Bengaluru

ಕೆಂಪೇಗೌಡರ ಜಯಂತಿ ಹಿನ್ನೆಲೆ; ನಾಡಪ್ರಭು ಪ್ರತಿಮೆಗೆ ಡಿಕೆಶಿ ಮಾಲಾರ್ಪಣೆ

ಬೆಂಗಳೂರು; ಇಂದು ನಾಡಪ್ರಭು ಕೆಂಪೇಗೌಡರ ಜಯಂತಿ. ಈ ಹಿನ್ನೆಲೆಯಲ್ಲಿ ವಿಧಾನಸೌಧದ ಮುಂಭಾಗದಲ್ಲಿರುವ ಕೆಂಪೇಗೌಡರ ಪ್ರತಿಮೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಮಾಲಾರ್ಪಣೆ ಮಾಡಿದರು. ಅನಂತರ ಕೆಂಪೇಗೌಡರ ಉತ್ಸವ ರಥಯಾತ್ರೆಗೆ ಪುಷ್ಪ ನಮನ ಸಲ್ಲಿಸಿದರು. 
   ಇದೇ ವೇಳೆ ಯಲಹಂಕ ಶಾಸಕ ಎಸ್ .ಆರ್. ವಿಶ್ವನಾಥ್, ಸಚಿವ ಕೃಷ್ಣ ಭೈರೇಗೌಡ ಹಾಜರಿದ್ದರು. ಇನ್ನು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ನಾನು ಮೊದಲ ಬಾರಿ ಸಿಎಂ ಆಗಿದ್ದಾಗ ನಮ್ಮ ಸರ್ಕಾರ ಕೆಂಪೇಗೌಡ ಜಯಂತಿ ಆರಂಭಿಸಿತು. ಸರ್ಕಾರದ ವತಿಯಿಂದ ಕೆಂಪೇಗೌಡ ಜಯಂತಿ ಆಚರಿಸಲು ಆದೇಶ ನೀಡಿದ್ದೆವು.  ಕೆಂಪೇಗೌಡ ಪ್ರಾಧಿಕಾರವನ್ನು ರಚನೆ ಮಾಡಿದ್ದು ಕೂಡಾ ನಾವೇ ಎಂದು ಹೇಳಿದರು.
Share Post