BengaluruPolitics

ಕಾಂಗ್ರೆಸ್ ಪಕ್ಷದಿಂದ ಕೆಜಿಎಫ್ ಬಾಬು ಅಮಾನತು

ಬೆಂಗಳೂರು; ಕೆ ಜಿ ಎಫ್ ಬಾಬು ಕಾಂಗ್ರೆಸ್ ಪಕ್ಷದ ನೀತಿಗೆ ವಿರುದ್ಧವಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ ಎಂಬ ಕಾರಣಕ್ಕಾಗಿ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

ನಿನ್ನೆ ಕಾಂಗ್ರೆಸ್‌ ಕಚೇರಿಯಲ್ಲೇ ಮಾತನಾಡಿದ್ದ ಕೆಜಿಎಫ್‌ ಬಾಬು, ಕಾಂಗ್ರೆಸ್ ಪಕ್ಷ ೮೦ ಸೀಟು ಗೆಲ್ಲುವುದಿಲ್ಲ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಕೆಪಿಸಿಸಿ ಶಿಸ್ತು ಸಮಿತಿಯಿಂದ ನೊಟೀಸ್ ನೀಡಲಾಗಿದೆ.

ಬಾಬು ನಡೆಯಿಂದ ಪಕ್ಷಕ್ಕೆ ಹಿನ್ನಡೆ ಆಗುತ್ತಿದೆ. ಈ ಹಿಂದೆ ಮೂರು ಬಾರಿ ಶೋಕಾಸ್ ನೊಟೀಸ್ ನೀಡಲಾಗಿತ್ತು. ಯಾವ ನೊಟೀಸಿಗೂ ಕೆ ಜಿ ಎಫ್ ಬಾಬು ಸಮಂಜಸ ಉತ್ತರ ನೀಡಿರಲಿಲ್ಲ. ಕೆಜಿಎಫ್ ಬಾಬು ಹೇಳಿಕೆಯು ಪಕ್ಷಕ್ಕೆ ಹಾನಿ ಉಂಟು ಮಾಡುತ್ತಿದ್ದು ಹಾಗೂ ಪಕ್ಷದ ಹಿನ್ನೆಡೆಗೆ ಕಾರಣವಾಗುತ್ತಿದೆ. ಅಧ್ಯಕ್ಷರ ಅನುಮತಿ ಇಲ್ಲದೆ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷವನ್ನು ಉದ್ದೇಶಿಸಿ ವಿವಿಧ ಹೇಳಿಕೆ ನೀಡಿದ್ದಾರೆ.ಇದನ್ನೆಲ್ಲಾ ಗಮನಿಸಿ ಇನ್ನು
ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಶಿಸ್ತು ಸಮಿತಿ ಮುಖ್ಯಸ್ಥ ರಹಮಾನ್ ಖಾನ್ ನೊಟೀಸ್ ನೀಡಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

Share Post