Bengaluru

ಕರ್ನಾಟಕ ರಕ್ಷಣಾ ವೇದಿಕೆಯಿಂದ ಮೆರವಣಿಗೆ

ಬೆಂಗಳೂರು: ನಗರದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪ ಹಾಗೂ ಪೊಲೀಸ್‌ ವಾಹನ ಧ್ವಂಸಗೊಳಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಜಾಥಾ ನಡೆಯುತ್ತಿದೆ. ಕರವೇ ಅಧ್ಯಕ್ಷ ಟಿ.ಎ ನಾರಾಯಣಗೌಡ ನೇತೃತ್ವದಲ್ಲಿ ಮೌರ್ಯ ಸರ್ಕಲ್‌ನಿಂದ ರಾಯಣ್ಣ ಪ್ರತಿಮೆಯವರೆಗೆ ಮೆರವಣಿಗೆ ನಡೆಸುತ್ತಿದ್ದಾರೆ. ಈ ವೇಳೆ ಎಂಇಎಸ್‌ ಪುಂಡರನ್ನು ಗಡಿಗಪಾರು ಮಾಡಲು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಈಗಾಗಲೇ ನಗರದಲ್ಲಿ ಪ್ರತಿಮೆ ಸುತ್ತಮುತ್ತ ಪೊಲೀಸ್‌ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಭದ್ರತೆಗಾಗಿ ಕೆಎಸ್ ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿದೆ.

 

Share Post