Bengaluru

ಬಸ್‌ಗೆ ಬೈಕ್‌ ಡಿಕ್ಕಿ, ಸವಾರ ಸಾವು; ಚಾಲಕ, ನಿರ್ವಾಹಕನಿಗೆ ಥಳಿತ

ಬೆಂಗಳೂರು; ಮಧ್ಯರಾತ್ರಿ ರಾಜಾಜಿನಗರದ ರಾಜ್‌ಕುಮಾರ್‌ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇದ್ರಿಂದ ರೊಚ್ಚಿಗೆದ್ದ ಮೃತನ ಸ್ನೇಹಿತರು ಬಸ್‌ ಚಾಲಕ ಹಾಗೂ ನಿರ್ವಾಹಕರಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಬಸ್‌ ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಆಗಮಿಸುತ್ತಿತ್ತು. ಮೆಜೆಸ್ಟಿಕ್‌ಗೆ ಹೋಗುತ್ತಿದ್ದ ಬಸ್‌ ಓವರ್‌ ಟೇಕ್‌ ಮಾಡಲು ಹೋಗಿ ಬೈಕ್‌ ಬಸ್‌ಗೆ ಡಿಕ್ಕಿ ಹೊಡೆದಿದೆ. ರಮೇಶ್‌ ಎಂಬ ಬೈಕ್‌ ಸವಾರ ಸಾವನ್ನಪ್ಪಿದ್ದಾನೆ.

Share Post