Bengaluru

ರೋಹಿತ್‌ ಚಕ್ರತೀರ್ಥ ವಿರುದ್ಧ ಆಕ್ರೋಶ; ಕುವೆಂಪು ಪ್ರತಿಷ್ಠಾನಕ್ಕೆ ಹಂ.ಪ.ನಾಗರಾಜಯ್ಯ ರಾಜೀನಾಮೆ

ಬೆಂಗಳೂರು; ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ಅವರ ವಿರುದ್ಧ ಆಕ್ರೋಶಗಳು ಜೋರಾಗುತ್ತಿವೆ ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಈಗಾಗಲೇ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಇತ್ತ ಸಾಹಿತಿ ದೇವನೂರು ಮಹಾದೇವ ಅವರು ಕೂಡಾ ಪಠ್ಯಪಸ್ತಕದಲ್ಲಿ ನನ್ನ ಪಠ್ಯವನ್ನು ಕೈಬಿಡಿ ಎಂದು ಹೇಳಿದ್ದಾರೆ. ಹೀಗಿರುವಾಗಲೇ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಸಾಹಿತಿ ಹಂ.ಪ.ನಾಗರಾಜಯ್ಯ ರಾಜೀನಾಮೆ ನೀಡಿದ್ದಾರೆ.

ನಾಡಗೀತೆ ಮತ್ತು ಕುವೆಂಪು ಅವರಿಗೆ ರೋಹಿತ್‌ ಚಕ್ರತೀರ್ಥ ಅವರು ಅವಮಾನ ಮಾಡಿದ್ದಾರೆ. ಅಂತಹ ವ್ಯಕ್ತಿ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ದೋರಣೆ ತಾಳಿದೆ. ಈ ಹಿನ್ನೆಲೆಯಲ್ಲಿ ನಾನು ರಾಜೀನಾಮೆ ನೀಡುತ್ತಿರುವುದಾಗಿ ಸಾಹಿತಿ ಹಂ.ಪ.ನಾಗರಾಜಯ್ಯ ಹೇಳಿದ್ದಾರೆ.

Share Post