BengaluruPolitics

4 ಕ್ಷೇತ್ರ ಗೆಲ್ಲಿಸ್ತಾರಂತೆ ಲಕ್ಷ್ಮಣ ಸವದಿ; ಏನಿದು ಕಾಂಗ್ರೆಸ್‌ ಗೇಮ್‌ ಪ್ಲ್ಯಾನ್‌..?

ಬೆಂಗಳೂರು; ಮಾಜಿ ಸಿಎಂ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್‌ ಸೇರೋದು ಪಕ್ಕಾ ಆಗಿದೆ. ಡಿ.ಕೆ.ಶಿವಕುಮಾರ್‌ ಕಳುಹಿಸಿದ್ದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿರುವ ಲಕ್ಷ್ಮಣ ಸವದಿ ಈಗಾಗಲೇ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಜೊತೆ ಮಾತುಕತೆ ನಡೆಸಿದ್ದಾರೆ. ಅನಂತರ ಡಿ.ಕೆ.ಶಿವಕುಮಾರ್‌ ಜೊತೆ ಕೂಡಾ ಮಾತುಕತೆ ನಡೆದಿದ್ದು, ಇದೀಗ ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಯುತ್ತಿದೆ. ಸಿದ್ದರಾಮಯ್ಯ ಜೊತೆ ಮಾತುಕತೆ ಮುಗಿದ ಮೇಲೆ ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆ ವಿಚಾರ ಪ್ರಕಟಿಸುವ ಸಾಧ್ಯತೆ ಇದೆ.

ಲಕ್ಷ್ಮಣ ಸವದಿಯವರು ನಾಲ್ಕು ಕ್ಷೇತ್ರಗಳಿಗೆ ಉಸ್ತುವಾರಿ ಕೇಳಿದ್ದಾರೆ ಎನ್ನಲಾಗಿದೆ. ಕಾಗವಾಡ, ರಾಮದುರ್ಗ, ಅಥಣಿ, ಸವದತ್ತಿ ಉಸ್ತುವಾರಿ ಕೇಳಿದ್ದು, ನಾಲ್ಕೂ ಕ್ಷೇತ್ರಗಳನ್ನೂ ನಾನು ಗೆಲ್ಲಿಸಿಕೊಂಡು ಬರುತ್ತೇನೆ ಎಂದು ಸವದಿ ಆಶ್ವಾಸನೆ ನೀಡಿದ್ದಾರೆ. ಇವಿಷ್ಟೇ ಅಲ್ಲದೆ ಸವದಿ ಅವರು ಹಲವು ಡಿಮ್ಯಾಂಡ್‌ಗಳನ್ನಿಟ್ಟಿದ್ದು, ಎಲ್ಲದಕ್ಕೂ ಕಾಂಗ್ರೆಸ್‌ ನಾಯಕರು ಓಕೆ ಎಂದು ಹೇಳಿದ್ದಾರೆ ಎನ್ನಲಾಗಿದೆ. ಇನ್ನು ಸವದಿ ಪುತ್ರ ಚಿದಾನಂದಗೆ ಅಥಣಿ ಟಿಕೆಟ್‌ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದೆ.

ಇದೀಗ ಸಿದ್ದರಾಮಯ್ಯ ಜೊತೆ ಮಾತುಕತೆ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್‌ ಜೊತೆ ಒಂದೇ ಕಾರಿನಲ್ಲಿ ಆಗಮಿಸಿರುವ ಸವದಿಯವರು ಸಿದ್ದರಾಮಯ್ಯ ನಿವಾಸದಲ್ಲಿ ಚರ್ಚೆ ನಡೆಸುತ್ತಿದ್ದಾರೆ.

Share Post