BengaluruDistricts

ಶರಾವತಿ ಯೋಜನೆ ಸಂತ್ರಸ್ತರಿಗೆ ಭೂಮಿ ಹಕ್ಕು ಪತ್ರ; ಕೇಂದ್ರಕ್ಕೆ ಪ್ರಸ್ತಾವನೆ

ಬೆಂಗಳೂರು; ಶರಾವತಿ ಯೋಜನೆಯಿಂದ ಭೂಮಿ ಕಳೆದುಕೊಂಡವರಿಗೆ ಜಮೀನು ಹಕ್ಕು ನೀಡುವ ಪ್ರಕ್ರಿಯೆ ಶುರುವಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸೋದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ವಿಷಯ ತಿಳಿಸಿದರು.

ಇಂದು ಗೃಹ ಸಚಿವ ಆರಗ ನೇತೃತ್ವದಲ್ಲಿ ಶರಾವತಿ ಸಂತ್ರಸ್ತರ ಸಮಸ್ಯೆ ಕುರಿತ ಸಭೆ ನಡೆಯಿತು. ಈ ಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಕೂಡಾ ಪಾಲ್ಗೊಂಡಿದ್ದರು. ಆ ಬಳಿಕ ಮಾತನಾಡಿದ ಬಿಎಸ್‌ವೈ, ಸಂತ್ರಸ್ತರಿಗೆ ಜಮೀನು ಹಕ್ಕು ನೀಡುವುದು ಹಲವು ವರ್ಷಗಳ ಬೇಡಿಕೆಯಾಗಿತ್ತು. 60 ವರ್ಷದಿಂದ ಈ ಸಮಸ್ಯೆ ಹಾಗೆಯೇ ಮುಂದುವರೆದಿತ್ತು. ಇತ್ತೀಚೆಗೆ ಕೇಂದ್ರ ಅರಣ್ಯ ಸಚಿವರ ಭೇಟಿ ಮಾಡಿದ್ದೆವು. ಅವರು ಎಲ್ಲಾ ಸರ್ವೆ ಮಾಡಿ ಪ್ರಪೋಸಲ್ ಕಳುಹಿಸಲು ಹೇಳಿದ್ದಾರೆ. ಹೀಗಾಗಿ ಪ್ರಸ್ತಾಪವನೆ ಸಿದ್ದ ಮಾಡಿ ಕಳುಹಿಸಿಕೊಡಲಾಗುತ್ತಿದೆ ಎಂದು ತಿಳಿಸಿದರು.

Share Post