Bengaluru

ಅಹಿತಕರ ಘಟನೆಗಳು ನಡೆದರೆ ಕಾನೂನಾತ್ಮಕ ಕ್ರಮ; ಗೃಹ ಸಚಿವ ಜಿ.ಪರಮೇಶ್ವರ್‌

ಬೆಂಗಳೂರು; ಸುಪ್ರೀಂ ಕೋರ್ಟ್‌ ಹಾಗೂ ಹೈಕೋರ್ಟ್‌ಗಳು ಯಾವುದೇ ಕಾರಣಕ್ಕೂ ಬಂದ್‌ ಮಾಡಬಾರದು ಎಂದು ಈ ಹಿಂದೆಯೇ ಆದೇಶಗಳನ್ನು ನೀಡಿವೆ. ಈ ಹಿನ್ನೆಲೆಯಲ್ಲಿ ನಾವು ಬಂದ್‌ಗೆ ಅವಕಾಶ ನೀಡುವುದಿಲ್ಲ. ಪ್ರತಿಭಟನೆ ಮಾಡೋದಕ್ಕೆ ಅವಕಾಶವಿದೆ. ಆದ್ರೆ ಬಂದ್‌ ಮಾಡಬಾರದು ಎಂದು ನಾವು ಪ್ರತಿಭಟನಾಕಾರರಿಗೆ ಸೂಚನೆ ಕೊಟ್ಟಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

ಕೋರ್ಟ್‌ಗಳೇ ಹೇಳಿರುವುದರಿಂದ ಕರ್ನಾಟಕ ಬಂದ್ ಮಾಡುವ ಹಾಗಿಲ್ಲ.  ಆದರೂ, ಬಂದ್ ಮಾಡಲು ವಿವಿಧ ಸಂಘಟನೆಗಳು ಕರೆ ಕೊಟ್ಟಿವೆ. ಅಹಿತಕರ ಘಟನೆಗಳು ನಡೆದರೆ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಪರಮೇಶ್ವರ್‌ ಇದೇ ವೇಳೆ ಹೇಳಿದರು. ನಮ್ಮಲ್ಲಿ ನೀರಿಲ್ಲ. ಹೀಗಾಗಿ ನಾವು ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಬರುವುದಿಲ್ಲ. ನಾವು ಸುಪ್ರೀಂ ಕೋರ್ಟ್‌ನಲ್ಲಿ ಈ ಬಗ್ಗೆ ಮೇಲ್ಮನವಿ ಸಲ್ಲಿಸಲಿದ್ದೇವೆ ಎಂದು ಪರಮೇಶ್ವರ್‌ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

 

Share Post