Bengaluru

ಹಿರಿಯ ನಟಿ ಲೀಲಾವತಿ ತೋಟದ ಗೇಟ್‌ನಲ್ಲಿ ಚಿರತೆ ಪ್ರತ್ಯಕ್ಷ!

ಬೆಂಗಳೂರು; ಬೆಂಗಳೂರು ನಗರದಲ್ಲಿ ಚಿರತೆಗಳ ಹಾವಳಿ ಜಾಸ್ತಿಯಾಗುತ್ತಿದೆ. ಮೊನ್ನೆಯಷ್ಟೇ ನಗರದಲ್ಲಿ ಕಾಣಿಸಿಕೊಂಡಿದ್ದ ಚಿರತೆಯ ಕಾರ್ಯಾಚರಣೆ ವೇಳೆ ಅದನ್ನು ಗುಂಡಿಕ್ಕಿ ಸಾಯಿಸಲಾಗಿತ್ತು. ಇದೀಗ ಮತ್ತೊಂದು ಚಿರತೆ ಪ್ರತ್ಯಕ್ಷವಾಗಿದೆ. ನೆಲಮಂಗಲ ಬಳಿಯ ಸೋಲದೇವನಹಳ್ಳಿಯಲ್ಲಿರುವ ಹಿರಿಯ ನಟಿ ಲೀಲಾವತಿ ಅವರ ತೋಟದ ಗೇಟ್‌ ಬಳಿ ಚಿರತೆಯೊಂದು ಕಾಣಿಸಿಕೊಂಡಿದೆ. ಕಳೆದ ರಾತ್ರಿ 10.30ರ ಸುಮಾರಿಗೆ ಲೀಲಾವತಿ ಅವರ ತೋಟದ ಗೇಟ್‌ ಬಳಿ ಚಿರತೆ ಓಡಾಡಿದೆ.

ಇದರಿಂದಾಗಿ ಸೋಲದೇವನಹಳ್ಳಿ, ಬಾಣಸವಾಡಿ, ಆಗಳಗುಪ್ಪೆ, ಚೋಡಸಂದ್ರ, ಹಂದಿಗುಟ್ಟೆ ಮುಂತಾದ ಗ್ರಾಮಗಳ ಜನ ಭಯಭೀತರಾಗಿದ್ದಾರೆ. ಕೂಡಲೇ ಚಿರತೆಯನ್ನು ಹಿಡಿಯುವಂತೆ ಆಗ್ರಹ ಮಾಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಬಂದಿದ್ದು, ಚಿರತೆಯನ್ನು ಸೆರೆ ಹಿಡಿಯಲು ಕ್ರಮ ಕೈಗೊಳ್ಳುತ್ತಿದ್ದಾರೆ.

 

Share Post